Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...