Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...