Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...