Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...