Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...