Homeಮುಖಪುಟಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

ಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಅಸೂಕ್ಷ್ಮ ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಇಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ನಾನು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿದೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಹೇಳಿದ್ದಾರೆ. ‘ಒಂದು ವೇಳೆ ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಲು ನಿರ್ಧರಿಸಿದರೆ ಏನಾಗುತ್ತದೆ ಎಂದು ಊಹಿಸಿ. ಅವರು ತಮ್ಮ ಕೆಲಸ ಸ್ಥಳದಲ್ಲಿ ಎದುರಿಸಬೇಕಾದ ಕಿರುಕುಳವನ್ನು ನೀವು ಊಹಿಸಬಹುದೇ? ಅಂತಹ ರಜೆಗಳನ್ನು ಜಾರಿಗೊಳಿಸುವುದು ಎಂದರೆ, ಆಕೆ ತನ್ನ ಮುಟ್ಟಿನ ದಿನಗಳ ಮಾಹಿತಿಯನ್ನು ಮಾನವ ಸಂಪನ್ಮೂಲ (ಹೆಚ್‌ಆರ್) ವಿಭಾಗಕ್ಕೆ ವರದಿ ಮಾಡಬೇಕು’ ಎಂದು ಸಚಿವರು ಹೇಳಿದರು.

‘ಕಾರ್ಖಾನೆಗಳು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚೆಚ್ಚು ಮಹಿಳೆಯರು ಬಂದು ಸೇರುವ ಅಗತ್ಯವಿದೆ ಎಂದು ನಾವು ಹೇಳುತ್ತಿರುವಾಗ, 20,000 ಮಹಿಳೆಯರಿರುವ ಒಂದು ಕಂಪನಿಯಲ್ಲಿ ಏನಾಗುತ್ತದೆ ಎಂದು ನೀವು ಕಲ್ಪಿಸಿಕೊಳ್ಳಿ. ಆದ್ದರಿಂದ, ಇದರಿಂದ ನಾವು ತಾರತಮ್ಯಕ್ಕೆ ಹೆಚ್ಚಿನ ಅವಕಾಶ ಸೃಷ್ಟಿಸಿದಂತಾಗುತ್ತದೆ’ ಎಂದರು.

ಆರ್‌ಜೆಡಿ ಸಂಸದ ಮನೋಜ್ ಝಾ ಅವರು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟು ಮಹಿಳೆಯರ ಜೀವನ ಪಯಣದ ಸಹಜ ಭಾಗವಾಗಿದೆ. ಋತುಸ್ರಾವದ ಮಹಿಳೆಯಾಗಿ, ಮುಟ್ಟಿನ ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನ ಪಯಣದ ಸ್ವಾಭಾವಿಕ ಭಾಗವಾಗಿದೆ. ಮುಟ್ಟಾಗದ ಯಾರಾದರೂ ಅದರ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುವ ಸಮಸ್ಯೆಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಸದನದಲ್ಲಿ ಹೇಳಿದ್ದರು.

ಇದನ್ನೂ ಓದಿ; ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...