Homeಮುಖಪುಟಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

ಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಅಸೂಕ್ಷ್ಮ ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಇಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ನಾನು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿದೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಹೇಳಿದ್ದಾರೆ. ‘ಒಂದು ವೇಳೆ ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಲು ನಿರ್ಧರಿಸಿದರೆ ಏನಾಗುತ್ತದೆ ಎಂದು ಊಹಿಸಿ. ಅವರು ತಮ್ಮ ಕೆಲಸ ಸ್ಥಳದಲ್ಲಿ ಎದುರಿಸಬೇಕಾದ ಕಿರುಕುಳವನ್ನು ನೀವು ಊಹಿಸಬಹುದೇ? ಅಂತಹ ರಜೆಗಳನ್ನು ಜಾರಿಗೊಳಿಸುವುದು ಎಂದರೆ, ಆಕೆ ತನ್ನ ಮುಟ್ಟಿನ ದಿನಗಳ ಮಾಹಿತಿಯನ್ನು ಮಾನವ ಸಂಪನ್ಮೂಲ (ಹೆಚ್‌ಆರ್) ವಿಭಾಗಕ್ಕೆ ವರದಿ ಮಾಡಬೇಕು’ ಎಂದು ಸಚಿವರು ಹೇಳಿದರು.

‘ಕಾರ್ಖಾನೆಗಳು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚೆಚ್ಚು ಮಹಿಳೆಯರು ಬಂದು ಸೇರುವ ಅಗತ್ಯವಿದೆ ಎಂದು ನಾವು ಹೇಳುತ್ತಿರುವಾಗ, 20,000 ಮಹಿಳೆಯರಿರುವ ಒಂದು ಕಂಪನಿಯಲ್ಲಿ ಏನಾಗುತ್ತದೆ ಎಂದು ನೀವು ಕಲ್ಪಿಸಿಕೊಳ್ಳಿ. ಆದ್ದರಿಂದ, ಇದರಿಂದ ನಾವು ತಾರತಮ್ಯಕ್ಕೆ ಹೆಚ್ಚಿನ ಅವಕಾಶ ಸೃಷ್ಟಿಸಿದಂತಾಗುತ್ತದೆ’ ಎಂದರು.

ಆರ್‌ಜೆಡಿ ಸಂಸದ ಮನೋಜ್ ಝಾ ಅವರು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟು ಮಹಿಳೆಯರ ಜೀವನ ಪಯಣದ ಸಹಜ ಭಾಗವಾಗಿದೆ. ಋತುಸ್ರಾವದ ಮಹಿಳೆಯಾಗಿ, ಮುಟ್ಟಿನ ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನ ಪಯಣದ ಸ್ವಾಭಾವಿಕ ಭಾಗವಾಗಿದೆ. ಮುಟ್ಟಾಗದ ಯಾರಾದರೂ ಅದರ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುವ ಸಮಸ್ಯೆಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಸದನದಲ್ಲಿ ಹೇಳಿದ್ದರು.

ಇದನ್ನೂ ಓದಿ; ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...