Homeಮುಖಪುಟಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

ಮಹಿಳೆಯರ ಮುಟ್ಟಿನ ಮಾಹಿತಿ ಉದ್ಯೋಗದಾತರಿಗೆ ಏಕೆ ತಿಳಿದಿರಬೇಕು: ತನ್ನ ನಿಲುವು ಸಮರ್ಥಿಸಿದ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಅಸೂಕ್ಷ್ಮ ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಇಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ನಾನು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿದೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಹೇಳಿದ್ದಾರೆ. ‘ಒಂದು ವೇಳೆ ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಲು ನಿರ್ಧರಿಸಿದರೆ ಏನಾಗುತ್ತದೆ ಎಂದು ಊಹಿಸಿ. ಅವರು ತಮ್ಮ ಕೆಲಸ ಸ್ಥಳದಲ್ಲಿ ಎದುರಿಸಬೇಕಾದ ಕಿರುಕುಳವನ್ನು ನೀವು ಊಹಿಸಬಹುದೇ? ಅಂತಹ ರಜೆಗಳನ್ನು ಜಾರಿಗೊಳಿಸುವುದು ಎಂದರೆ, ಆಕೆ ತನ್ನ ಮುಟ್ಟಿನ ದಿನಗಳ ಮಾಹಿತಿಯನ್ನು ಮಾನವ ಸಂಪನ್ಮೂಲ (ಹೆಚ್‌ಆರ್) ವಿಭಾಗಕ್ಕೆ ವರದಿ ಮಾಡಬೇಕು’ ಎಂದು ಸಚಿವರು ಹೇಳಿದರು.

‘ಕಾರ್ಖಾನೆಗಳು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚೆಚ್ಚು ಮಹಿಳೆಯರು ಬಂದು ಸೇರುವ ಅಗತ್ಯವಿದೆ ಎಂದು ನಾವು ಹೇಳುತ್ತಿರುವಾಗ, 20,000 ಮಹಿಳೆಯರಿರುವ ಒಂದು ಕಂಪನಿಯಲ್ಲಿ ಏನಾಗುತ್ತದೆ ಎಂದು ನೀವು ಕಲ್ಪಿಸಿಕೊಳ್ಳಿ. ಆದ್ದರಿಂದ, ಇದರಿಂದ ನಾವು ತಾರತಮ್ಯಕ್ಕೆ ಹೆಚ್ಚಿನ ಅವಕಾಶ ಸೃಷ್ಟಿಸಿದಂತಾಗುತ್ತದೆ’ ಎಂದರು.

ಆರ್‌ಜೆಡಿ ಸಂಸದ ಮನೋಜ್ ಝಾ ಅವರು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟು ಮಹಿಳೆಯರ ಜೀವನ ಪಯಣದ ಸಹಜ ಭಾಗವಾಗಿದೆ. ಋತುಸ್ರಾವದ ಮಹಿಳೆಯಾಗಿ, ಮುಟ್ಟಿನ ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನ ಪಯಣದ ಸ್ವಾಭಾವಿಕ ಭಾಗವಾಗಿದೆ. ಮುಟ್ಟಾಗದ ಯಾರಾದರೂ ಅದರ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುವ ಸಮಸ್ಯೆಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಸದನದಲ್ಲಿ ಹೇಳಿದ್ದರು.

ಇದನ್ನೂ ಓದಿ; ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...