Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...