Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...