Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...