Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...