Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...