Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...