Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...