Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...