Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...