Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...