Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...