Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...