Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...