Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...