Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...