Homeಕರ್ನಾಟಕ'ನಾನೇಕೆ ಗಾಂಧಿಯನ್ನು ಕೊಂದೆ' ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

- Advertisement -
- Advertisement -

ಮಹಾತ್ಮ ಗಾಂಧೀಜಿ ಅವರನ್ನು ಅವಹೇಳನ ಮಾಡುವ ʼನಾನೇಕೆ ಗಾಂಧಿಯನ್ನು ಕೊಂದೆʼ ಎಂಬ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ಆಗ್ರಹಿಸಿದೆ.

ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಶ್ರಮಿಸಿದ ಮಹಾತ್ಮನ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ. ಅವರು ಕುರಿತು ಸುಳ್ಳು ಸುದ್ದಿಗಳನ್ನು ಬಿತ್ತಲಾಗುತ್ತಿದೆ. ಆ ಮೂಲಕ ಮಹಾತ್ಮರ ಅನನ್ಯ ಸಾಧನೆಗಳನ್ನು ಮರೆಮಾಚಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ. ಅದರ ಭಾಗವಾಗಿಯೇ ಮಹಾತ್ಮರ ವಿರುದ್ಧ ಸಿನಿಮಾಗಳನ್ನು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರಮುಖವಾಗಿ ಜ.30 ರಂದು ಚಿತ್ರಮಂದಿರ ಹಾಗೂ ಓಟಿಟಿ ವೇದಿಕೆಗಳಲ್ಲಿ ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಒಂದೆಡೆ ಅಹಿಂಸೆ, ಶಾಂತಿಗಾಗಿ ಗಾಂಧೀಜಿ ಅವರ ಪುಣ್ಯತಿಥಿ ಆಚರಿಸಿದರೆ, ಮತ್ತೊಂದೆಡೆ ʼನಾನೇಕೆ ಗಾಂಧಿಯನ್ನು ಕೊಂದೆʼ ಸಿನಿಮಾ ಬಿಡುಗಡೆ ಮಾಡುವ ಮೂಲಕ ಭಯೋತ್ಪಾದನೆ, ಹಿಂಸಾಚಾರವನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ ಎಂದು ಸೇವಾದಳ ಯಂಗ್ ಬ್ರಿಗೇಡ್ ಅಧ್ಯಕ್ಷರಾದ ಜುನೈದ್‌ರವರು ಕಿಡಿಕಾರಿದ್ದಾರೆ.

ಮಹಾತ್ಮ ಗಾಂಧಿಯವರನ್ನು ಕೊಂದ ನಾಥೂರಾಮ್ ಗೂಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕನಾಗಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಗಾಂಧೀಜಿಯವರ ಈ ದೇಶದ ಮೇಲೆ ನಡೆದ ದಾಳಿ ಎಂದೇ ಪರಿಗಣಿಸಲ್ಪಟ್ಟಿದೆ. ಆದರೆ ಗೂಡ್ಸೆಯಂತ ಭಯೋತ್ಪಾದಕರನ್ನು ಆರಾಧಿಸುವ ಸಂತತಿ ಭಾರತದಲ್ಲಿ ಬೆಳೆಯುತ್ತಿದ್ದು, ಅವರೆ ಈ ರೀತಿಯ ಸಿನಿಮಾ ನಿರ್ಮಾಣ ಮಾಡಿ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾದ ನಾವು ಮಹಾತ್ಮನನ್ನು ಗುಂಡಿಟ್ಟು ಕೊಂದ ಹೇಡಿಯನ್ನು ವಿರೋಧಿಸುತ್ತೇವೆ. ಹದಗೆಡುತ್ತಿರುವ ಸೌಹಾರ್ದತೆಯನ್ನು ಹಾಗೂ ಸಾಮಾಜಿಕ ಸಾಮರಸ್ಯ ಪುನಃ ಪ್ರತಿಷ್ಠಾಪಿಸಲು ಶ್ರಮಿಸುತ್ತಿದ್ದೇನೆ. ಮಹಾತ್ಮನ ವಿಚಾರಗಳನ್ನು ದೇಶದ ಮೂಲೆ ಮೂಲೆಗಳಲ್ಲೂ ತಲುಪಿಸಬೇಕಾಗಿದೆ ಹೊರತು ಹೇಡಿಯಾದ ಕೊಲೆಗಡುಕ ಗೋಡ್ಸೆಯ ದೃಷ್ಟಿಕೋನಗಳನ್ನಲ್ಲ ಎಂದು ನಂಬಿದ್ದೇವೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಲಾಗಿದೆ.


ಇದನ್ನೂ ಓದಿ: ಕರ್ನಾಟಕ ಕೊರೊನಾ: 24 ಗಂಟೆಯಲ್ಲಿ 67 ಸಾವಿರ ಡಿಸ್ಚಾರ್ಜ್, 38 ಸಾವಿರ ಹೊಸ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊಲೆಗೆ ಯಾವ ಸಮರ್ಥನೆಯನ್ನು ಕೊಟ್ಟರೂ ಅದು ಕೊಲೆಯೇ. ಅದರಲ್ಲೂ ಮಹಾತ್ಮ ಗಾಂಧಿಯವರ ಕೊಲೆಯನ್ನು ಸಮರ್ಥಿಸಿಕೊಳ್ಳುವುದು ಅಪರಾಧ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...