Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...