Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...