Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...