Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...