Homeಮುಖಪುಟ'ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ': ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

‘ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ’: ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

- Advertisement -
- Advertisement -

ಜೆಡಿಎಸ್ ಪಕ್ಷವು ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂಬ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡುವಾಗ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮವಾಗಿ ಮಾತನಾಡಿರುವುದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಯಲ್ಲಿ ನಿರತರಾಗಿರುವ ಕುಮಾರಸ್ವಾಮಿಯವರು ಖಾಸಗಿ ಇಂಗ್ಲಿಷ್ ವಾಹಿನಿಯೊಂದಕ್ಕೆ ನೀಡಿದ ಚುಟುಕು ಸಂದರ್ಶನದಲ್ಲಿ ಈ ಮಾತುಗಳನ್ನು ಆಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದಾರೆ.

ಕುಮಾರಸ್ವಾಮಿಯವರು ಒಂದು ಪಕ್ಷದ ಶಾಸಕಾಂಗ ಪಕ್ಷದ ಮುಖಂಡರಾಗಿ, ಮಾಜಿ ಮುಖ್ಯ ಮಂತ್ರಿಗಳಾಗಿ ಆ ಪಕ್ಷದ ಅಧ್ಯಕ್ಷರಿಗೆ ಸಿಎಂ ಸ್ಥಾನ ನೀಡುವ ಕುರಿತು ಮಾತನಾಡುವುದು ತಪ್ಪಲ್ಲ. ಆದರೆ ಮಾತಿನ ಮಧ್ಯೆ ಅವರೇನು ಅಸ್ಪೃಶ್ಯರಲ್ಲ ಎಂದು ಹೇಳುವ ಮೂಲಕ ಅಸ್ಪೃಶ್ಯ ಸಮುದಾಯಗಳನ್ನು ಅವಮಾನಿಸಿ, ಅಸ್ಪೃಶ್ಯರಿಗೆ ಅಧಿಕಾರ ನೀಡುವ ಅಗತ್ಯವಿಲ್ಲ ಎನ್ನುವ ಧಾಟಿಯಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಸೂಕ್ಷ್ಮತೆಯನ್ನು ಹೊಂದಿರಬೇಕಾಗುತ್ತದೆ. ಅಸ್ಪೃಶ್ಯತೆ ಎಂಬುದು ಭಾರತಕ್ಕೆ ಅಂಟಿದ ಶಾಪ ಹಲವು ಮಹನೀಯರು ಅಭಿಪ್ರಾಯಪಟ್ಟಿದ್ದಾರೆ. ಹೀಗಿರುವಾಗ ಅಸ್ಪೃಶ್ಯತೆಯನ್ನು ತೊಡೆದುಹಾಕಬೇಕಾದರೆ ಅವರಿಗೆ ಅಧಿಕಾರ-ಸಮಾನತೆ ನೀಡುವ ಮೂಲಕ ಮುಖ್ಯವಾಹಿನಿ ಸಮಾಜದ ಭಾಗವಾಗುವಂತೆ ಮಾಡಬೇಕಿದೆ. ಅದನ್ನೇ ನಮ್ಮ ಸಂವಿಧಾನ ಹೇಳುತ್ತದೆ. ಒಂದು ಕಡೆ ದಲಿತರನ್ನು ಸಿಎಂ, ಡಿಸಿಎಂ ಮಾಡುತ್ತೇವೆ ಎನ್ನುವವರು ಇನ್ನೊಂದು ಕಡೆ ಅವರೇನು ಅಸ್ಪೃಶ್ಯರಲ್ಲ ಎನ್ನುವುದು ವಿರೋಧಭಾಸ ಮಾತ್ರವಲ್ಲ ಅವರ ನೈಜ ಕಾಳಜಿಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಈ ಹೇಳಿಕೆಯನ್ನು ಕುಮಾರಸ್ವಾಮಿ ಪರಿಶೀಲಿಸಿ ವಾಪಸ್ ಪಡೆದು ಕ್ಷಮೆ ಕೇಳಬೇಕು ಮತ್ತು ಉಳಿದವರಿಗೆ ಇದು ಪಾಠವಾಗಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...