Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...