Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...