Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...