Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...