Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...