Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...