Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...