Homeಕರ್ನಾಟಕಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ

- Advertisement -
- Advertisement -

ತುಮಕೂರಿಗೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್ಟರು ಪೌರತ್ವ ಕಾಯ್ದೆ ಪರ ಭೀಕರ ಭಾಷಣ ಮಾಡಿಹೋದರು. ಸಭೆಯಲ್ಲಿ ಥರಾವರಿ ಪ್ರಶ್ನೆಗಳು ಕೇಳಿದರು. ಅದು ಯಾರಿಗೆ ಕೇಳಿದರು ಎಂಬುದು ಅಲ್ಲಿದ್ದ ಜನರಿಗೆ ಸ್ವಲ್ಪ ಗಲಿಬಿಲಿಯೇ ಆಗಿರಬೇಕು. ಯಾಕೆಂದರೆ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಅಂಥಾದ್ದರಲ್ಲಿ ಭಾರತದಲ್ಲಿ ಗೋಹತ್ಯೆ ಏಕೆ ಮಾಡುತ್ತಾರೆ ಎಂದು ಜನರನ್ನು ಪ್ರಶ್ನಿಸಬೇಕೇ? ಕೇಂದ್ರದಲ್ಲಿ ನಪುಂಸಕ ನಾಯಕತ್ವ ಇಲ್ಲ. ಈಗಿನದು ಬಲಿಷ್ಟವಾಗಿದೆ ಎಂದು ಬೀಗಿದರು, ಪ್ರಶ್ನೆ ಮಾತ್ರ ಜನರಿಗೆ ಕೇಳಿದರು.

ಆದರೆ ಕಳೆದ ಎಂಟು ವರ್ಷದಲ್ಲಿ ನಪುಂಸಕ ನಾಯಕತ್ವ ಇಲ್ಲದಿದ್ದರೂ (ಅವರೇ ಹೇಳಿಕೊಂಡಂತೆ) ಭಾರತದಿಂದ ದನದ ಮಾಂಸ ರಫ್ತಾಗುತ್ತಿದೆಯಲ್ಲವೇ? ಅದನ್ನು ಪೌರುಷವಂತರು ತಡೆಯಬೇಕಿತ್ತಲ್ಲವೇ? ಯಾಕೆ ತಡೆಯಲಿಲ್ಲ? ಗೋಹತ್ಯೆಯನ್ನೂ ಸಂಪೂರ್ಣ ನಿಯಂತ್ರಿಸಬೇಕಿತ್ತಲ್ಲವೇ? ಈ ಪ್ರಶ್ನೆಗಳಿಗೆ ಪ್ರಭಾಕರ ಭಟ್ಟರ ಬಳಿ ಉತ್ತರವಿದ್ದಂತೆ ಕಾಣುತ್ತಿಲ್ಲ. ಗೊತ್ತಿದ್ದರೂ ಭಟ್ಟರಲ್ಲವೇ ವಿಸ್ಮೃತಿ ಹೆಚ್ಚಿರಬೇಕು? ಹೌದು ಭಾರತದಲ್ಲಿ ಗೋಹತ್ಯೆ ಹೆಚ್ಚಾಗಲು ಕಾರಣವೇನು? ದನದ ಮಾಂಸ ರಫ್ತು ಮಾಡಲು ಯಾರು ಕಾರಣ? ಎಂಬುದನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು ಇವು.

ಕಳೆದ ಆರು ವರ್ಷಗಳಲ್ಲಿ ಅಂದರೆ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಭಾರತದಿಂದ ದನದ ಮಾಂಸ ರಫ್ತು ಹೆಚ್ಚಳವಾಗಿರುವುದನ್ನು ಕೇಂದ್ರ ಪಶುಸಂಗೋಪನಾ ಇಲಾಖೆ ಬಿಡುಗಡೆಗೊಳಿಸಿದ ಅಂಕಿಅಶಶಗಳು ದೃಢಪಡಿಸುತ್ತವೆ. 2014-15ನೇ ಸಾಲಿನಲ್ಲಿ ಮೋದಿ ಸರ್ಕಾರ 14,75,440 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದೆ. ಇದು ಹತ್ತು ವರ್ಷಗಳಲ್ಲೇ ಅತಿಹೆಚ್ಚು ರಫ್ತು ಮಾಡಿದ ಹೆಗ್ಗಳಿಕೆ ಭಾರತದ್ದು. ಇದರಿಂದ ಭಾರತ ಸರ್ಕಾರ ಆ ಸಾಲಿನಲ್ಲಿ 29,282 ಕೋಟಿ ರೂಪಾಯಿ ಆದಾಯ ಗಳಿಸಿದೆ. 2015-16ನೇ ಸಾಲಿನಲ್ಲಿ 13,14,000 ಮೆಟ್ರಿಕ್ ಟನ್ ರಫ್ತು ಮಾಡಿದೆ. ಆದರೆ 2016-17ನೇ ಸಾಲಿನಲ್ಲಿ 13,30,013 ಮೆಟ್ರಿಕ್ ಟನ್ ರಫ್ತು ಮಾಡಿದ್ದು ಅದು ಕಳೆದ ವರ್ಷಕ್ಕಿಂತ ಶೇಕಡ 1.2ರಷ್ಟು ಹೆಚ್ಚಳವಾಗಿದೆ.

2017-18ರಲ್ಲಿ 13,48,225 ಮೆಟ್ರಿಕ್ ಟನ್ ರಫ್ತು ಮಾಡಿದ್ದು 25,988.41 ಕೋಟಿ ರೂಪಾಯಿ ಭಾರತಕ್ಕೆ ಆದಾಯ ಬಂದಿದೆ. ಇದು ಕಳೆದ ಸಾಲಿಗಿಂತ ಶೇಕಡ 1.3ರಷ್ಟು ಹೆಚ್ಚಳ ಕಂಡುಬಂದಿದೆ. 2018-19ನೇ ಸಾಲಿನಲ್ಲಿ ಭಾರತ 19,00,000 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿ ವಿಶ್ವದ ಎರಡನೇ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಪಡೆದಿದೆ. ಅಂದರೆ ಬ್ರೆಜಿಲ್ ಶೇಕಡ 19.33ರಷ್ಟು ಅಂದರೆ 20,25,000 ಮೆಟ್ರಿಕ್ ಟನ್ ದನದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದ್ದರೆ, ಭಾರತ ಶೇಕಡ 18.14ರಷ್ಟು ದನದ ಮಾಂಸ ರಫ್ತು ಮಾಡಿ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಶೇಕಡ 13.10ರಷ್ಟು ಅಂದರೆ 13,72,000 ಮೆಟ್ರಿಕ್ ಟನ್ ವಿದೇಶಗಳಿಗೆ ದನದ ಮಾಂಸ ಪೂರೈಕೆ ಮಾಡಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ದನದ ಮಾಂಸ ಅತಿಹೆಚ್ಚು ಸೇವನೆ ಮಾಡುವ ಪಾಕಿಸ್ತಾನ ರಫ್ತಿನಲ್ಲಿ 14ನೇ ಸ್ಥಾನದಲ್ಲಿದೆ.

ಟೈಮ್ಸ್ ಆಫ್ ಇಂಡಿಯಾ, ದಿ ಹಿಂದೂ, ದಿ ಪ್ರಿಂಟ್ ಮೊದಲಾದ ವೆಬ್ ಸೈಟ್‌ಗಳಲ್ಲಿ ಉಲ್ಲೇಖಿಸಿರುವಂತೆ ಕಳೆದ ನಾಲ್ಕು ವರ್ಷಗಳಲ್ಲಿ ದನದ ಮಾಂಸ ರಫ್ತು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಅವಧಿಯಲ್ಲಿ 56 ಇಂಚಿನ ಪ್ರಧಾನಿಯೇ ಅಧಿಕಾರದಲ್ಲಿರುವುದು ಎಂಬುದು ಗಮನಾರ್ಹ ಸಂಗತಿ. ಅಪ್ಪಟ ದೇಶಭಕ್ತರು, ಗೋಮಾತೆಯ ಪೂಜಕರು, ಗೋವಿನಲ್ಲಿ 33 ಕೋಟಿ ದೇವರು ನೆಲೆಸಿವೆ ಎಂದು ಪ್ರತಿಪಾದಿಸುವ ಸಂಘ ಪರಿವಾರದ ಭಕ್ತರು ನರೇಂದ್ರ ಮೋದಿ ಅವರೇ ಪ್ರಧಾನಿ ಸ್ಥಾನದಲ್ಲಿದ್ದರೂ ದನದ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಭಕ್ತಗಣ ಸುಳ್ಳು ಹೇಳುವುದನ್ನು ಬಿಟ್ಟು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಮೈಯೆಲ್ಲಾ ಸುಳ್ಳನ್ನೇ ಪೂಸಿಕೊಂಡಿರುವ ಕಲ್ಲಡ್ಕ ಪ್ರಭಾಕರ್ ಭಟ್ಟರಂಥವರು ತಮ್ಮ ಮಾತೃ ಸಂಸ್ಥೆಯ ಕೂಸುಗಳು ಅಧಿಕಾರದಲ್ಲಿದ್ದ ಕಾಲದಲ್ಲೇ ಅತ್ಯಧಿಕ ಗೋಮಾಂಸ ರಫ್ತಾಗುವುದನ್ನು ನಿಯಂತ್ರಿಸಲು ಏಕೆ ಸಾಧ್ಯವಾಗಲಿಲ್ಲ? ಸತ್ಯವನ್ನು ಎದೆಯಲ್ಲಿ ಬಚ್ಚಿಟ್ಟುಕೊಳ್ಳದೇ ಹೊರಹಾಕಬೇಕು.

ಅತಿಹೆಚ್ಚು ಗೋಮಾಂಸ ತಿನ್ನುವ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ 14ನೇ ಸ್ಥಾನದಲ್ಲಿದೆ. ಅದು ಬಿಡಿ ಬಿಜೆಪಿಯ ಪರಮ ವೈರಿ ದೇಶ. ಭಾರತದಲ್ಲಿ ಗೋಮಾತೆಯ ಪೂಜಕರು ಇರುವ ದೇಶದಲ್ಲೇ ಅದೂ ತಮ್ಮ ಆಡಳಿತದ ಅವಧಿಯಲ್ಲಿ ದನದ ಮಾಂಸ ಅತ್ಯಧಿಕವಾಗಿ ರಫ್ತು ಮಾಡುತ್ತಿದ್ದರೂ ಮೌನವೇಕೆ ವಹಿಸಿದ್ದೀರಿ. ಪ್ರಧಾನಿಯನ್ನು ದಿಟ್ಟಿಸಿ ಕೇಳಬೇಕಲ್ಲವೇ? ಅದು ನಿಮ್ಮಿಂದ ಸಾಧ್ಯವಿಲ್ಲ, ಅಲ್ಲವೇ? ದನ ತಿನ್ನುವವರ ಬಗ್ಗೆ ತುಚ್ಛವಾಗಿ ಕಾಣುವ ಸಂಘಪರಿವಾರ ಗೋಮಾಂಸ ರಫ್ತು ಮಾಡುವ ತಮ್ಮದೇ ಸರ್ಕಾರದ ಬಗ್ಗೆ ಸುಮ್ಮನಿರುತ್ತೀರಿ. ಇದು ಇಬ್ಬಗೆ ನೀತಿಯಲ್ಲವೇ? ಸಂಸ್ಕೃತಿ ರಕ್ಷಕರು ಸುಳ್ಳುಗಳ ಪಾಠ ಹೇಳುವುದು ಬಿಟ್ಟು ವಾಸ್ತವತೆ ಅರ್ಥ ಮಾಡಿಕೊಂಡರೆ ಒಳ್ಳೆದು.

ಮೇಲಿನ ಅಂಕಿಅಂಶಗಳಿಂದ ತಿಳಿದುಬರುವುದೇನೆಂದರೆ ಕಾಂಗ್ರೆಸ್ ಆಡಳಿತ ಇದ್ದ ಸಂದರ್ಭಕ್ಕಿಂತಲೂ ಅತಿಹೆಚ್ಚು ಗೋಮಾಂಸ ರಫ್ತು ಮಾಡಿರುವುದು ಬಿಜೆಪಿ ಅವಧಿಯಲ್ಲೇ. ಅದು ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ವ್ಯಾಪಕವಾಗಿ ದನದ ಮಾಂಸ ರಫ್ತು ಮಾಡಿದ್ದು. ಆದರೆ ವೇದಿಕೆ ಸಿಕ್ಕಲ್ಲಿ ದ್ವೇಷವನ್ನೇ ಉಗುಳುವ ಕಲ್ಲಡ್ಕ ಪ್ರಭಾಕರ ಭಟ್ಟರಂಥ ಢೋಂಗಿಗಳು ಗೋಮಾತೆಯ ಭಜನೆ ಮಾಡುತ್ತಾರೆ. ಯುವಜನರ ಮನಸ್ಸಿನಲ್ಲಿ ವಿಷದ ಬೀಜವ ಬಿತ್ತಿ ಇಡೀ ಸಮಾಜವೇ ದ್ವೇಷದಿಂದ ಕುದಿಯುವಂತೆ ಮಾಡುವುದನ್ನು ಬಿಟ್ಟು ಈ ದೇಶದಲ್ಲಿ ಕ್ಯಾನ್ಸರ್ ನಂತೆ ಹರಡಿರುವ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ತಾರತಮ್ಯ ಭಾವನೆ, ನಿರುದ್ಯೋಗ ಮೊದಲಾದ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಎಲ್ಲರ ಬದುಕು ಹಸನಾದೀತು? ಅವರು ಈ ನಿಟ್ಟಿನಲ್ಲಿ ಯೋಚಿಸುವುದು ಒಳ್ಳೆಯದು.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...