Homeಚಳವಳಿಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

80 ವರ್ಷದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಜನಸಾಮಾನ್ಯರ ಪರ ಮಾಡಿರುವ ವಕೀಲಿಕೆ ಅಗಾಧವಾದದ್ದು

- Advertisement -
- Advertisement -

ನಿನ್ನೆ ಇಂದಿರಾ ಜೈಸಿಂಗ್ ಮತ್ತು ಅವರ ಪತಿ ಆನಂದ್ ಗ್ರೋವರ್ ಅವರ ಸ್ವಯಂ ಸೇವಾ ಸಂಸ್ಥೆಯ (ಲಾಯರ್ಸ್ ಕಲೆಕ್ಟಿವ್) ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿದ್ದು, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010ರ ಅಡಿಯಲ್ಲಿ ಹಲವು ಆರೋಪಗಳನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದಿರಾ ಜೈಸಿಂಗ್ ಯಾರು, ಯಾತಕ್ಕಾಗಿ ಸಿಬಿಐ ದಾಳಿ ಮತ್ತಿತರರ ವಿಚಾರಗಳನ್ನು ಚರ್ಚಿಸಬೇಕಾಗಿದೆ.

ಇಂದಿರಾ ಜೈಸಿಂಗ್ ಯಾರು?

ಮಾನವ ಹಕ್ಕುಗಳ ರಕ್ಷಣೆಯ ಹೋರಾಟದಲ್ಲಿ ಇಂದಿರಾ ಜೈಸಿಂಗ್ ರವರ ಹೆಸರು ಐತಿಹಾಸಿಕವಾದುದ್ದು. ಹಲವು ಕಾನೂನು ಹೋರಾಟಗಳಲ್ಲಿ ಬಹಿರಂಗ ಮತ್ತು ಧೈರ್ಯವಂತಿಕೆಯ ಮಧ್ಯಪ್ರವೇಶ ಮತ್ತು ಕೆಲಸಕ್ಕೆ ಹೆಸರುವಾಸಿಯಾದ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ದೊರಕಿದೆ. 1986 ರಲ್ಲಿ, ಬಾಂಬೆಯ ಹೈಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಇವರು 2009 ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು.

ಇಂದಿರಾ ಜೈಸಿಂಗ್ ಹಲವಾರು ಮಹತ್ವದ ಕಾನೂನು ಹೋರಾಟಗಳನ್ನು ಗೆದ್ದಿದ್ದಾರೆ, ಅದರಲ್ಲೂ ವಿಶೇಷವಾಗಿ ಕ್ರಿಶ್ಚಿಯನ್ ಮಹಿಳೆಯರ ಆಸ್ತಿಯನ್ನು ಆನುವಂಶಿಕವಾಗಿ ಪಡೆಯುವ ಹಕ್ಕು, ಮಕ್ಕಳ ಪಾಲನೆ ಪ್ರಕರಣಗಳಲ್ಲಿ ನೈಸರ್ಗಿಕ ರಕ್ಷಕರಾಗಿ ತಾಯಿಯ ಹಕ್ಕು ಮುಖ್ಯವಾದವು. ಜೊತೆಗೆ 1984 ರ ಡಿಸೆಂಬರ್‌ನಲ್ಲಿ ಭೋಪಾಲ್ ಅನಿಲ ದುರಂತದಿಂದ ಬಲಿಯಾದವರಿಗೆ ಮತ್ತು ಬದುಕುಳಿದವರಿಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ಅವರು ಯೂನಿಯನ್ ಕಾರ್ಬೈಡ್ ನಿಗಮದ ವಿರುದ್ಧ ಹೋರಾಡಿದವರು.

1980 ರ ಅವಧಿಯಲ್ಲಿ ಬಾಂಬೆಯ ಪಾದಚಾರಿ ನಿವಾಸಿಗಳ ಹಕ್ಕುಗಳ ಪರವಾಗಿ ಮತ್ತು  ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಪ್ರದೇಶವನ್ನು ಗಣಿಗಾರಿಕೆಯಿಂದ ರಕ್ಷಿಸುವ ಸಲುವಾಗಿ ಇವರು ಮಾಡಿರುವ ಕೆಲಸಗಳು ಮಾನವ ಹಕ್ಕುಗಳು ಮತ್ತು ಪರಿಸರ ಕಾರ್ಯಗಳಲ್ಲಿ ಪ್ರಮುಖವಾದವುಗಳಾಗಿವೆ.

ಜೀವ ಉಳಿಸುವ ಕ್ಯಾನ್ಸರ್ ಔಷಧ ಗ್ಲಿವೆಕ್‌ ಎಲ್ಲಾರಿಗೂ ಸಿಗಬೇಕೆಂದು ನೊವಾರ್ಟಿಸ್ ಪೇಟೆಂಟ್ ಅನ್ನು ವಿರೋಧಿಸುವ ಹೋರಾಟದಲ್ಲಿ ಇಂದಿರಾ ಜೈಸಿಂಗ್ ನೇತೃತ್ವದ ಲಾಯರ್ಸ್ ಕಲೆಕ್ಟಿವ್ ಸಾಕಷ್ಟು ಕೆಲಸ ಮಾಡೆದೆ. ತದ ನಂತರವಷ್ಟೇ  ಏಪ್ರಿಲ್ 01, 2013 ರಂದು, ನೊವಾರ್ಟಿಸ್ ಅವರ ಪೇಟೆಂಟ್ ಅನ್ನು ಭಾರತದ ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಉದ್ಯೋಗ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಎಚ್‌ಐವಿ ವ್ಯಕ್ತಿ ಗಳಿಗೆ ತಾರತಮ್ಯದ ಮಸೂದೆಯ ವಿರುದ್ಧವೂ ಜೈಸಿಂಗ್ ಕೆಲಸ ಮಾಡಿದ್ದಾರೆ.

ಇಂದಿರಾ ಜೈಸಿಂಗ್ ರವರ ಲಾಯರ್ಸ್ ಕಲೆಕ್ಟಿವ್ ಮೇಲೆ ಸಿಬಿಐ ದಾಳಿ ಏಕೆ?

ಎಫ್‌ಸಿಆರ್‌ಎ (ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010) ಉಲ್ಲಂಘನೆ ಆರೋಪದ ಮೇಲೆ ಗೃಹ ಸಚಿವಾಲಯದ ಆದೇಶದ ಮೇರೆಗೆ ಆರು ತಿಂಗಳ ಕಾಲ ಲಾಯರ್ಸ್ ಕಲೆಕ್ಟಿವ್ ಪರವಾನಗಿಗಳನ್ನು ರದ್ದುಗೊಳಿಸಿದೆ. ಲಾಯರ್ಸ್ ಕಲೆಕ್ಟಿವ್ ಜೂನ್ 2016 ರಿಂದಲೂ ಮೋದಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ವಿದೇಶಿ ದೇಣಿಗೆಯನ್ನು ರಾಜಕೀಯ ಪ್ರೇರಿತ ರ್ಯಾಲಿ ಮತ್ತು ಧರಣಿಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. 2016 ರಲ್ಲಿ ದೇಶದ ಹಿತಾಸಕ್ತಿಗೆ ಹಾನಿಕಾರಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಲಾದ 25 ಎನ್‌ಜಿಒಗಳ ಪಟ್ಟಿಯಲ್ಲಿಯೂ ಈ ಸಂಘಟನೆಯನ್ನು ಸೇರಿಸಲಾಗಿದೆ.

ಇಂದಿರಾ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಲ್ಲೇ 2016 ರಲ್ಲಿಯೇ ದಾಖಲೆಗಳನ್ನು ನೀಡಿ ಸ್ಪಷ್ಟಪಡಿಸಿದ್ದಾರೆ. ಆದರೆ 2019 ರ ಮೇ ತಿಂಗಳಲ್ಲಿ ಬಿಜೆಪಿ ಬೆಂಬಲಿತ ಲಾಯರ್ಸ್ ವಾಯ್ಸ್ ಎಂಬ ಮತ್ತೊಂದು ಎನ್‌ಜಿಒ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿ ಲಾಯರ್ಸ್ ಕಲೆಕ್ಟಿವ್ ಎಫ್‌ಸಿಆರ್‌ಎ ಉಲ್ಲಂಘಿಸಿದೆ ಎಂದು ಆರೋಪಿಸಿತ್ತು. “ರಾಷ್ಟ್ರದ ವಿರುದ್ಧದ ಚಟುವಟಿಕೆಗಳಿಗಾಗಿ” ವಿದೇಶಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಲಾಯರ್ಸ್ ಕಲೆಕ್ಟಿವ್ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಲಾಯರ್ಸ್ ವಾಯ್ಸ್ ಕೋರಿದೆ. ಲಾಯರ್ಸ್ ವಾಯ್ಸ್ ನ ಸಂಯೋಜಕರಾದ ನೀರಜ್ ಅವರು ಬಿಜೆಪಿಯ ಅಖಿಲ ಭಾರತ ಕಾನೂನು ಸೆಲ್ ನ ಸಹ ಸಂಯೋಜಕರು ಆಗಿದ್ದಾರೆ.

ಇಂದಿರಾರವರ ಚಟುವಟಿಕೆಗಳು “ದೇಶದ ಹಿತಾಸಕ್ತಿಗಳಿಗೆ ಹಾನಿಕಾರಕವೆ”?

ಮೇಲ್ನೋಟದಲ್ಲಿಯೇ ಈ ಆರೋಪಗಳು ಸುಳ್ಳೆಂದು ಕಾಣುತ್ತವೆ. ಗೃಹ ಸಚಿವಾಲಯವು ಲಾಯರ್ಸ್ ಕಲೆಕ್ಟಿವ್ 2009, 2011 ಮತ್ತು 2014 ರಲ್ಲಿ ಕರಡು ಮಸೂದೆ ರಚಿಸುವ ಶಾಸನ ಸಭೆಗಳಿಗೆ ಮತ್ತು ಸಂಸದರು ಹಾಗೂ ಮಾಧ್ಯಮದ ಪರವಾಗಿ ವಕಾಲತ್ತು ವಹಿಸಲು, ರ್ಯಾಲಿಗಳು / ಧರಣಿಗಳನ್ನು ಆಯೋಜಿಸಲು ವಿದೇಶಿ ಕೊಡುಗೆಯಿಂದ 13 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಬಳಸಿದೆ, ಎಂದು ಆರೋಪಿಸಿದೆ.

ನಿಜ ಅಂದರೆ ಯಾವುದೇ ಮಸೂದೆ ರಚನೆಯಾಗಬೇಕಾದರೆ ಹಲವಾರು ಕರಡುಗಳು ಮತ್ತು ಸಂಬಂಧಪಟ್ಟವರ ಸಭೆಗಳ ಮೂಲಕ ನಡೆಯಬೇಕು. ಕರಡು ಶಾಸನ ಸಭೆಗಳು, ರ್ಯಾಲಿಗಳನ್ನು ಆಯೋಜಿಸಿದ್ದು ಕೂಡ ತಾನು ಕಾರ್ಯನಿರ್ವಹಿಸುತ್ತಿರುವ ಎಚ್‌ಐವಿ ಸೊಂಕಿತರಿಗೆ ತಾರತಮ್ಯವಾಗಬಾರದು ಎಂಬ ಮಸೂದೆಗಾಗಿ. ಆನಂದ್ ಗ್ರೋವರ್ ಮೇಲೆ ಆರೋಪಿಸಿರುವ ವಿದೇಶಿ ಕೊಡುಗೆಯೊಂದಿಗೆ ಪ್ರಯಾಣವು ನೊವಾರ್ಟಿಸ್ ಪ್ರಕರಣಕ್ಕೆ ಸಂಬಂಧಿಸಿದೆ. ಇವುಗಳಲ್ಲಿ ಯಾವುದಾದರೂ ರಾಷ್ಟ್ರ ವಿರೋಧಿ ಹೇಗೆ ಆಗುತ್ತದೆ?

ಇಂದಿರಾ ಜೈಸಿಂಗ್ ಅವರು ಸರ್ಕಾರಿ ನೌಕರರಾಗಿದ್ದಾಗ ವಿದೇಶಿ ಹಣವನ್ನು ಸ್ವೀಕರಿಸಿದ್ದಾರೆ ಎಂಬ ಆರೋಪವಿದೆ. ಅದು ಲಾಯರ್ಸ್ ಕಲೆಕ್ಟಿವ್ ಅನುದಾನ ಪಡೆದಿರುವುದೇ ವಿನಃ ಲಂಚವಲ್ಲವೆಂದು ಮತ್ತು ಆ ಅವಧಿಯಲ್ಲಿ ಅವರು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕಾರಣದಿಂದ ಲಾಯರ್ಸ್ ಕಲೆಕ್ವಿವ್ ಗೆ ಕೆಲಸ ಮಾಡಿಲ್ಲವೆಂದೂ, ಆ ಅವಧಿಯಲ್ಲಿ ಪಡೆದ ಅನುದಾನಕ್ಕೆ ಸರ್ಕಾರದ ಅನುಮತಿ ಸಹ ಇತ್ತು ಎಂದು ಅವರು 2016 ರಲ್ಲಿಯೇ ಸ್ಪಷ್ಟಪಡಿಸಿದ್ದರು. ಇದರಲ್ಲಿ ಅಪರಾಧವೇನಿದೆ?

ಹಾಗಾದರೆ ಇವರ ಮೇಲೆ ಟಾರ್ಗೆಟ್ ಏಕೆ?

ಏಕೆಂದರೆ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನರೇಂದ್ರ ಮೋದಿಯವರ ನೀತಿಗಳನ್ನು ಈ ದಂಪತಿಗಳು ನಿರ್ಭಯವಾಗಿ ಟೀಕಿಸುತ್ತಿದ್ದರು. ಜೊತೆಗೆ ಭಾರತೀಯ ಜನತಾ ಪಕ್ಷದ ಅವ್ಯವಹಾರ ಮತ್ತು ಸಂವಿಧಾನ ವಿರೋಧಿ ನಡೆಗಳನ್ನು ಪ್ರಶ್ನಿಸಿದ ಸಂಜೀವ್ ಭಟ್, ತಿಸ್ತಾ ಸೆಟ್ಲವಾದ್ ರವರ ಪರವಾದ ಕೇಸುಗಳನ್ನು ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ರವರ ಲಾಯರ್ಸ್ ಕಲೆಕ್ವಿವ್ ನಡೆಸುತ್ತಿದೆ. ಈ ರೀತಿಯ ಪ್ರಜಾತಾಂತ್ರಿಕ ಮತ್ತು ಸಂವಿಧಾನಬದ್ಧವಾದ ಕೆಲಸ ಮಾಡುತ್ತಿರುವುದೇ ಮೋದಿ ಮತ್ತು ಅಮಿತ್ ಶಾರಿಗೆ ತಲೆನೋವಾಗಿದೆ. ಆ ಕಾರಣಕ್ಕಾಗಿಯೇ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ.

ಭುಗಿಲೆದ್ದ ಪ್ರತಿರೋಧ

ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ನಡೆಸಿದ ದಾಳಿಯನ್ನು ಖಂಡಿಸಿ ಸುಮಾರು 200 ಶಿಕ್ಷಣ ತಜ್ಞರು, ಕಾರ್ಯಕರ್ತರು, ಕಲಾವಿದರು ಮತ್ತು ಇತರರು ಹೇಳಿಕೆಗೆ ಸಹಿ ಹಾಕಿದ್ದಾರೆ. ಹಿರಿಯ ವಕೀಲರ ಮೇಲಿನ ದಾಳಿಗಳನ್ನು ಖಂಡಿಸಿ ರಾಜ್ಯಸಭೆಯ ಪ್ರತಿಪಕ್ಷ ಸಂಸದರು ಪಿಎಂ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಈ ದಂಪತಿಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ನಾಗರಿಕ ಸಮಾಜದ ಪ್ರತಿನಿಧಿಗಳು ಇಂದಿರಾ ಮತ್ತು ಗ್ರೋವರ್ ಮೇಲಿನ ದಾಳಿಯೂ ದೀರ್ಘಕಾಲದಿಂದಲೂ ನಡೆಯುತ್ತಿರುವ ಬೆದರಿಕೆ ಮತ್ತು ಹತ್ತಿಕ್ಕುವಿಕೆಯ ಇತ್ತೀಚೆಗಿನ ಸೇರ್ಪಡೆಗಳಾಗಿವೆ. ಇದು ಅಧಿಕಾರ ದುರಪಯೋಗದ ಹಸಿ ಕ್ರೌರ್ಯವಲ್ಲದೇ ಬೇರೆನಲ್ಲ ಎಂದು ಕಿಡಿಕಾರಿದ್ದಾರೆ.

ಇಂಗ್ಲಿಷ್ ನಲ್ಲಿ ಓದಿ: Who is Indira Jaising and why CBI raid?

 

ಸಹಿ ಮಾಡಿದವರಲ್ಲಿ ಅರ್ಥಶಾಸ್ತ್ರಜ್ಞರಾದ ಅಮಿಯಾ ಕುಮಾರ್ ಬಾಗ್ಚಿ ಮತ್ತು ಜಯತಿ ಘೋಷ್, ಲೇಖಕಿ ಗೀತಾ ಹರಿಹರನ್, ಪತ್ರಕರ್ತರಾದ ನಿತಿನ್ ಸೇಥಿ ಮತ್ತು ಪಮೇಲಾ ಫಿಲಿಪೋಸ್, ಮತ್ತು ಕಲಾವಿದರು ವಿವನ್ ಸುಂದರಂ ಮತ್ತು ಪಾರ್ಥಿವ್ ಷಾ ಪ್ರಮುಖರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...