Homeಚಳವಳಿಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

80 ವರ್ಷದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಜನಸಾಮಾನ್ಯರ ಪರ ಮಾಡಿರುವ ವಕೀಲಿಕೆ ಅಗಾಧವಾದದ್ದು

- Advertisement -
- Advertisement -

ನಿನ್ನೆ ಇಂದಿರಾ ಜೈಸಿಂಗ್ ಮತ್ತು ಅವರ ಪತಿ ಆನಂದ್ ಗ್ರೋವರ್ ಅವರ ಸ್ವಯಂ ಸೇವಾ ಸಂಸ್ಥೆಯ (ಲಾಯರ್ಸ್ ಕಲೆಕ್ಟಿವ್) ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿದ್ದು, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010ರ ಅಡಿಯಲ್ಲಿ ಹಲವು ಆರೋಪಗಳನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದಿರಾ ಜೈಸಿಂಗ್ ಯಾರು, ಯಾತಕ್ಕಾಗಿ ಸಿಬಿಐ ದಾಳಿ ಮತ್ತಿತರರ ವಿಚಾರಗಳನ್ನು ಚರ್ಚಿಸಬೇಕಾಗಿದೆ.

ಇಂದಿರಾ ಜೈಸಿಂಗ್ ಯಾರು?

ಮಾನವ ಹಕ್ಕುಗಳ ರಕ್ಷಣೆಯ ಹೋರಾಟದಲ್ಲಿ ಇಂದಿರಾ ಜೈಸಿಂಗ್ ರವರ ಹೆಸರು ಐತಿಹಾಸಿಕವಾದುದ್ದು. ಹಲವು ಕಾನೂನು ಹೋರಾಟಗಳಲ್ಲಿ ಬಹಿರಂಗ ಮತ್ತು ಧೈರ್ಯವಂತಿಕೆಯ ಮಧ್ಯಪ್ರವೇಶ ಮತ್ತು ಕೆಲಸಕ್ಕೆ ಹೆಸರುವಾಸಿಯಾದ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ದೊರಕಿದೆ. 1986 ರಲ್ಲಿ, ಬಾಂಬೆಯ ಹೈಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಇವರು 2009 ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು.

ಇಂದಿರಾ ಜೈಸಿಂಗ್ ಹಲವಾರು ಮಹತ್ವದ ಕಾನೂನು ಹೋರಾಟಗಳನ್ನು ಗೆದ್ದಿದ್ದಾರೆ, ಅದರಲ್ಲೂ ವಿಶೇಷವಾಗಿ ಕ್ರಿಶ್ಚಿಯನ್ ಮಹಿಳೆಯರ ಆಸ್ತಿಯನ್ನು ಆನುವಂಶಿಕವಾಗಿ ಪಡೆಯುವ ಹಕ್ಕು, ಮಕ್ಕಳ ಪಾಲನೆ ಪ್ರಕರಣಗಳಲ್ಲಿ ನೈಸರ್ಗಿಕ ರಕ್ಷಕರಾಗಿ ತಾಯಿಯ ಹಕ್ಕು ಮುಖ್ಯವಾದವು. ಜೊತೆಗೆ 1984 ರ ಡಿಸೆಂಬರ್‌ನಲ್ಲಿ ಭೋಪಾಲ್ ಅನಿಲ ದುರಂತದಿಂದ ಬಲಿಯಾದವರಿಗೆ ಮತ್ತು ಬದುಕುಳಿದವರಿಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ಅವರು ಯೂನಿಯನ್ ಕಾರ್ಬೈಡ್ ನಿಗಮದ ವಿರುದ್ಧ ಹೋರಾಡಿದವರು.

1980 ರ ಅವಧಿಯಲ್ಲಿ ಬಾಂಬೆಯ ಪಾದಚಾರಿ ನಿವಾಸಿಗಳ ಹಕ್ಕುಗಳ ಪರವಾಗಿ ಮತ್ತು  ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಪ್ರದೇಶವನ್ನು ಗಣಿಗಾರಿಕೆಯಿಂದ ರಕ್ಷಿಸುವ ಸಲುವಾಗಿ ಇವರು ಮಾಡಿರುವ ಕೆಲಸಗಳು ಮಾನವ ಹಕ್ಕುಗಳು ಮತ್ತು ಪರಿಸರ ಕಾರ್ಯಗಳಲ್ಲಿ ಪ್ರಮುಖವಾದವುಗಳಾಗಿವೆ.

ಜೀವ ಉಳಿಸುವ ಕ್ಯಾನ್ಸರ್ ಔಷಧ ಗ್ಲಿವೆಕ್‌ ಎಲ್ಲಾರಿಗೂ ಸಿಗಬೇಕೆಂದು ನೊವಾರ್ಟಿಸ್ ಪೇಟೆಂಟ್ ಅನ್ನು ವಿರೋಧಿಸುವ ಹೋರಾಟದಲ್ಲಿ ಇಂದಿರಾ ಜೈಸಿಂಗ್ ನೇತೃತ್ವದ ಲಾಯರ್ಸ್ ಕಲೆಕ್ಟಿವ್ ಸಾಕಷ್ಟು ಕೆಲಸ ಮಾಡೆದೆ. ತದ ನಂತರವಷ್ಟೇ  ಏಪ್ರಿಲ್ 01, 2013 ರಂದು, ನೊವಾರ್ಟಿಸ್ ಅವರ ಪೇಟೆಂಟ್ ಅನ್ನು ಭಾರತದ ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಉದ್ಯೋಗ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಎಚ್‌ಐವಿ ವ್ಯಕ್ತಿ ಗಳಿಗೆ ತಾರತಮ್ಯದ ಮಸೂದೆಯ ವಿರುದ್ಧವೂ ಜೈಸಿಂಗ್ ಕೆಲಸ ಮಾಡಿದ್ದಾರೆ.

ಇಂದಿರಾ ಜೈಸಿಂಗ್ ರವರ ಲಾಯರ್ಸ್ ಕಲೆಕ್ಟಿವ್ ಮೇಲೆ ಸಿಬಿಐ ದಾಳಿ ಏಕೆ?

ಎಫ್‌ಸಿಆರ್‌ಎ (ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010) ಉಲ್ಲಂಘನೆ ಆರೋಪದ ಮೇಲೆ ಗೃಹ ಸಚಿವಾಲಯದ ಆದೇಶದ ಮೇರೆಗೆ ಆರು ತಿಂಗಳ ಕಾಲ ಲಾಯರ್ಸ್ ಕಲೆಕ್ಟಿವ್ ಪರವಾನಗಿಗಳನ್ನು ರದ್ದುಗೊಳಿಸಿದೆ. ಲಾಯರ್ಸ್ ಕಲೆಕ್ಟಿವ್ ಜೂನ್ 2016 ರಿಂದಲೂ ಮೋದಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ವಿದೇಶಿ ದೇಣಿಗೆಯನ್ನು ರಾಜಕೀಯ ಪ್ರೇರಿತ ರ್ಯಾಲಿ ಮತ್ತು ಧರಣಿಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. 2016 ರಲ್ಲಿ ದೇಶದ ಹಿತಾಸಕ್ತಿಗೆ ಹಾನಿಕಾರಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಲಾದ 25 ಎನ್‌ಜಿಒಗಳ ಪಟ್ಟಿಯಲ್ಲಿಯೂ ಈ ಸಂಘಟನೆಯನ್ನು ಸೇರಿಸಲಾಗಿದೆ.

ಇಂದಿರಾ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಲ್ಲೇ 2016 ರಲ್ಲಿಯೇ ದಾಖಲೆಗಳನ್ನು ನೀಡಿ ಸ್ಪಷ್ಟಪಡಿಸಿದ್ದಾರೆ. ಆದರೆ 2019 ರ ಮೇ ತಿಂಗಳಲ್ಲಿ ಬಿಜೆಪಿ ಬೆಂಬಲಿತ ಲಾಯರ್ಸ್ ವಾಯ್ಸ್ ಎಂಬ ಮತ್ತೊಂದು ಎನ್‌ಜಿಒ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿ ಲಾಯರ್ಸ್ ಕಲೆಕ್ಟಿವ್ ಎಫ್‌ಸಿಆರ್‌ಎ ಉಲ್ಲಂಘಿಸಿದೆ ಎಂದು ಆರೋಪಿಸಿತ್ತು. “ರಾಷ್ಟ್ರದ ವಿರುದ್ಧದ ಚಟುವಟಿಕೆಗಳಿಗಾಗಿ” ವಿದೇಶಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಲಾಯರ್ಸ್ ಕಲೆಕ್ಟಿವ್ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಲಾಯರ್ಸ್ ವಾಯ್ಸ್ ಕೋರಿದೆ. ಲಾಯರ್ಸ್ ವಾಯ್ಸ್ ನ ಸಂಯೋಜಕರಾದ ನೀರಜ್ ಅವರು ಬಿಜೆಪಿಯ ಅಖಿಲ ಭಾರತ ಕಾನೂನು ಸೆಲ್ ನ ಸಹ ಸಂಯೋಜಕರು ಆಗಿದ್ದಾರೆ.

ಇಂದಿರಾರವರ ಚಟುವಟಿಕೆಗಳು “ದೇಶದ ಹಿತಾಸಕ್ತಿಗಳಿಗೆ ಹಾನಿಕಾರಕವೆ”?

ಮೇಲ್ನೋಟದಲ್ಲಿಯೇ ಈ ಆರೋಪಗಳು ಸುಳ್ಳೆಂದು ಕಾಣುತ್ತವೆ. ಗೃಹ ಸಚಿವಾಲಯವು ಲಾಯರ್ಸ್ ಕಲೆಕ್ಟಿವ್ 2009, 2011 ಮತ್ತು 2014 ರಲ್ಲಿ ಕರಡು ಮಸೂದೆ ರಚಿಸುವ ಶಾಸನ ಸಭೆಗಳಿಗೆ ಮತ್ತು ಸಂಸದರು ಹಾಗೂ ಮಾಧ್ಯಮದ ಪರವಾಗಿ ವಕಾಲತ್ತು ವಹಿಸಲು, ರ್ಯಾಲಿಗಳು / ಧರಣಿಗಳನ್ನು ಆಯೋಜಿಸಲು ವಿದೇಶಿ ಕೊಡುಗೆಯಿಂದ 13 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಬಳಸಿದೆ, ಎಂದು ಆರೋಪಿಸಿದೆ.

ನಿಜ ಅಂದರೆ ಯಾವುದೇ ಮಸೂದೆ ರಚನೆಯಾಗಬೇಕಾದರೆ ಹಲವಾರು ಕರಡುಗಳು ಮತ್ತು ಸಂಬಂಧಪಟ್ಟವರ ಸಭೆಗಳ ಮೂಲಕ ನಡೆಯಬೇಕು. ಕರಡು ಶಾಸನ ಸಭೆಗಳು, ರ್ಯಾಲಿಗಳನ್ನು ಆಯೋಜಿಸಿದ್ದು ಕೂಡ ತಾನು ಕಾರ್ಯನಿರ್ವಹಿಸುತ್ತಿರುವ ಎಚ್‌ಐವಿ ಸೊಂಕಿತರಿಗೆ ತಾರತಮ್ಯವಾಗಬಾರದು ಎಂಬ ಮಸೂದೆಗಾಗಿ. ಆನಂದ್ ಗ್ರೋವರ್ ಮೇಲೆ ಆರೋಪಿಸಿರುವ ವಿದೇಶಿ ಕೊಡುಗೆಯೊಂದಿಗೆ ಪ್ರಯಾಣವು ನೊವಾರ್ಟಿಸ್ ಪ್ರಕರಣಕ್ಕೆ ಸಂಬಂಧಿಸಿದೆ. ಇವುಗಳಲ್ಲಿ ಯಾವುದಾದರೂ ರಾಷ್ಟ್ರ ವಿರೋಧಿ ಹೇಗೆ ಆಗುತ್ತದೆ?

ಇಂದಿರಾ ಜೈಸಿಂಗ್ ಅವರು ಸರ್ಕಾರಿ ನೌಕರರಾಗಿದ್ದಾಗ ವಿದೇಶಿ ಹಣವನ್ನು ಸ್ವೀಕರಿಸಿದ್ದಾರೆ ಎಂಬ ಆರೋಪವಿದೆ. ಅದು ಲಾಯರ್ಸ್ ಕಲೆಕ್ಟಿವ್ ಅನುದಾನ ಪಡೆದಿರುವುದೇ ವಿನಃ ಲಂಚವಲ್ಲವೆಂದು ಮತ್ತು ಆ ಅವಧಿಯಲ್ಲಿ ಅವರು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕಾರಣದಿಂದ ಲಾಯರ್ಸ್ ಕಲೆಕ್ವಿವ್ ಗೆ ಕೆಲಸ ಮಾಡಿಲ್ಲವೆಂದೂ, ಆ ಅವಧಿಯಲ್ಲಿ ಪಡೆದ ಅನುದಾನಕ್ಕೆ ಸರ್ಕಾರದ ಅನುಮತಿ ಸಹ ಇತ್ತು ಎಂದು ಅವರು 2016 ರಲ್ಲಿಯೇ ಸ್ಪಷ್ಟಪಡಿಸಿದ್ದರು. ಇದರಲ್ಲಿ ಅಪರಾಧವೇನಿದೆ?

ಹಾಗಾದರೆ ಇವರ ಮೇಲೆ ಟಾರ್ಗೆಟ್ ಏಕೆ?

ಏಕೆಂದರೆ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನರೇಂದ್ರ ಮೋದಿಯವರ ನೀತಿಗಳನ್ನು ಈ ದಂಪತಿಗಳು ನಿರ್ಭಯವಾಗಿ ಟೀಕಿಸುತ್ತಿದ್ದರು. ಜೊತೆಗೆ ಭಾರತೀಯ ಜನತಾ ಪಕ್ಷದ ಅವ್ಯವಹಾರ ಮತ್ತು ಸಂವಿಧಾನ ವಿರೋಧಿ ನಡೆಗಳನ್ನು ಪ್ರಶ್ನಿಸಿದ ಸಂಜೀವ್ ಭಟ್, ತಿಸ್ತಾ ಸೆಟ್ಲವಾದ್ ರವರ ಪರವಾದ ಕೇಸುಗಳನ್ನು ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ರವರ ಲಾಯರ್ಸ್ ಕಲೆಕ್ವಿವ್ ನಡೆಸುತ್ತಿದೆ. ಈ ರೀತಿಯ ಪ್ರಜಾತಾಂತ್ರಿಕ ಮತ್ತು ಸಂವಿಧಾನಬದ್ಧವಾದ ಕೆಲಸ ಮಾಡುತ್ತಿರುವುದೇ ಮೋದಿ ಮತ್ತು ಅಮಿತ್ ಶಾರಿಗೆ ತಲೆನೋವಾಗಿದೆ. ಆ ಕಾರಣಕ್ಕಾಗಿಯೇ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ.

ಭುಗಿಲೆದ್ದ ಪ್ರತಿರೋಧ

ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ನಡೆಸಿದ ದಾಳಿಯನ್ನು ಖಂಡಿಸಿ ಸುಮಾರು 200 ಶಿಕ್ಷಣ ತಜ್ಞರು, ಕಾರ್ಯಕರ್ತರು, ಕಲಾವಿದರು ಮತ್ತು ಇತರರು ಹೇಳಿಕೆಗೆ ಸಹಿ ಹಾಕಿದ್ದಾರೆ. ಹಿರಿಯ ವಕೀಲರ ಮೇಲಿನ ದಾಳಿಗಳನ್ನು ಖಂಡಿಸಿ ರಾಜ್ಯಸಭೆಯ ಪ್ರತಿಪಕ್ಷ ಸಂಸದರು ಪಿಎಂ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಈ ದಂಪತಿಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ನಾಗರಿಕ ಸಮಾಜದ ಪ್ರತಿನಿಧಿಗಳು ಇಂದಿರಾ ಮತ್ತು ಗ್ರೋವರ್ ಮೇಲಿನ ದಾಳಿಯೂ ದೀರ್ಘಕಾಲದಿಂದಲೂ ನಡೆಯುತ್ತಿರುವ ಬೆದರಿಕೆ ಮತ್ತು ಹತ್ತಿಕ್ಕುವಿಕೆಯ ಇತ್ತೀಚೆಗಿನ ಸೇರ್ಪಡೆಗಳಾಗಿವೆ. ಇದು ಅಧಿಕಾರ ದುರಪಯೋಗದ ಹಸಿ ಕ್ರೌರ್ಯವಲ್ಲದೇ ಬೇರೆನಲ್ಲ ಎಂದು ಕಿಡಿಕಾರಿದ್ದಾರೆ.

ಇಂಗ್ಲಿಷ್ ನಲ್ಲಿ ಓದಿ: Who is Indira Jaising and why CBI raid?

 

ಸಹಿ ಮಾಡಿದವರಲ್ಲಿ ಅರ್ಥಶಾಸ್ತ್ರಜ್ಞರಾದ ಅಮಿಯಾ ಕುಮಾರ್ ಬಾಗ್ಚಿ ಮತ್ತು ಜಯತಿ ಘೋಷ್, ಲೇಖಕಿ ಗೀತಾ ಹರಿಹರನ್, ಪತ್ರಕರ್ತರಾದ ನಿತಿನ್ ಸೇಥಿ ಮತ್ತು ಪಮೇಲಾ ಫಿಲಿಪೋಸ್, ಮತ್ತು ಕಲಾವಿದರು ವಿವನ್ ಸುಂದರಂ ಮತ್ತು ಪಾರ್ಥಿವ್ ಷಾ ಪ್ರಮುಖರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...