Homeಕರ್ನಾಟಕಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

- Advertisement -
- Advertisement -

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ (ಕೈನಿಂದ ಮಲ ಬಾಚುವುದು) ಮಾಡುತ್ತಿರುವವರು ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ ಎಂದು ಪ್ರಶ್ನಿಸಿದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, “ಭಾರತದಲ್ಲಿ ಜಾರಿಗೆ ತಂದಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ” ಎಂದು ಬೇಸರ ಹೊರಹಾಕಿದರು.

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿವಿಯ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಸಫಾಯಿ ಕರ್ಮಚಾರಿ ಕಾವಲು ಸಮಿತಿ, ತಮಟೆ, ಸಖಿ ಟ್ರಸ್ಟ್ ಸಹಯೋಗದೊಂದಿಗೆ ಮಲ ಹೊರುವ ವೃತ್ತಿಯಲ್ಲಿ ನೇಮಕ ನಿಷೇಧ ಹಾಗೂ ಅವರ ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಮತ್ತು ಸವಾಲುಗಳು ಕುರಿತ ‘ರಾಷ್ಟೀಯ ಸಮಾವೇಶ’ದಲ್ಲಿ ಅವರು ಮಾತನಾಡಿದರು.

“ಮ್ಯಾನುಯಲ್ ಸ್ಕ್ಯಾವೆಂಜರ್ ವೃತ್ತಿಗೂ ಮತ್ತು ಜಾತಿಗೆ ನೇರ ಸಂಬಂಧವಿದೆ; ವಂಶ ಪಾರಂಪರಿಕವಾಗಿ ಕೆಲವೇ ಕೆಲವು ಜಾತಿಗಳು ಈ ವೃತ್ತಿಯನ್ನುಮಾಡುತ್ತಿದ್ದಾರೆ. ಅದರಲ್ಲೂ, ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಕೇವಲ ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ” ಎಂದು ಹೇಳಿದರು.

“ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದ್ದರೂ ಮಲಹೊರುವ ಪದ್ಧತಿ ಜೀವಂತವಾಗಿದೆ. ಇಂದು ಭಾರತವು ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಯಾಗುತ್ತಿದ್ದರೂ ಈ ರೀತಿಯ ವೃತ್ತಿಗಳನ್ನು ಯಾಕೆ ಯಾಂತ್ರೀಕರಣಗೊಳಿಸುತ್ತಿಲ್ಲ? 2013ರ ಕಾಯ್ದೆ ಅನುಸಾರ ಸಮಗ್ರವಾದ ಸಮೀಕ್ಷೆಯನ್ನು ಸರಕಾರಗಳು ಕೈಗೊಳ್ಳಬೇಕು. ಕಾಯ್ದೆಯಡಿಯಲ್ಲಿ ಸಮಗ್ರ ಪುನರ್ವಸತಿಯನ್ನು ನೀಡಬೇಕು; ಜನರೂ ಸಹ ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಬೇಕು. ಅನಿವಾರ್ಯತೆಗಳಿದ್ದರೂ ಈ ವೃತ್ತಿಯನ್ನು ಮಾಡಬಾರದು; ಇತರೆ ಉದ್ಯೋಗಳನ್ನು ಆಯ್ಕೆಮಾಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು” ಎಂದು ಸಲಹೆ ನೀಡಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞೆ ಅಶ್ವಿನಿ ಕೆ.ಪಿ. ಮಾತನಾಡಿ, “ಮ್ಯಾನುಯಲ್ ಸ್ಕ್ಯಾವೆಂಜರ್ ಕುರಿತು ಅಂತರರಾಷ್ಟ್ರೀಯಮಟ್ಟದಲ್ಲಿ ಚರ್ಚಿಸಬೇಕಾಗುತ್ತದೆ; ನಾವೆಲ್ಲರೂ ಅದಕ್ಕೆ ಪೂರಕವಾಗಿ ಕೆಲಸ ಮಾಡೋಣ. ಭಾರತದಲ್ಲಿ ಜಾತಿ ಆಧಾರಿತ ವೃತ್ತಿಗಳಿಂದ ನಾವು ಹೊರ ಬರಬೇಕಾಗಿದೆ. ಅಂತರರಾಷ್ಟ್ರೀಯಮಟ್ಟದಲ್ಲಿ ಇದೇ ರೀತಿಯ ತಾರತಮ್ಯಗಳನ್ನು ಚರ್ಚಿಸಲಾಗುತ್ತದೆ. ಅದಕ್ಕೆ ಪೂರಕವಾಗಿ ನಾವು ಭಾರತದಲ್ಲಿರುವ ಜಾತಿ ಆಧಾರಿತವಿಷಯಗಳನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳಲ್ಲಿ ಮತ್ತು ವಿಶ್ವಸಂಸ್ಥೆಯಲ್ಲಿ ಚರ್ಚಿಸಲು ಪ್ರಯತ್ನಿಸಬೇಕಾಗಿದೆ” ಎಂದು ತಿಳಿಸಿದರು.

ಸಮಾವೇಶದಲ್ಲಿ ರಾಷ್ಟ್ರೀಯ ಕಾನೂನು ಶಾಲೆಯ ಸಾರ್ವಜನಿಕ ನೀತಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಬಾಬು ಮ್ಯಾಥೂ, ಪ್ರಾಧ್ಯಾಪಕ ಚಂದ್ರಶೇಖರ್, ಹಿರಿಯ ಸಾಹಿತಿ ಡಾ.ಎಲ್.ಹನುಮಂತಯ್ಯ ಮತ್ತು ದು. ಸರಸ್ವತಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಲೋಕಾಯುಕ್ತರಿಂದ ‘ಕ್ಲೀನ್ ಚಿಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...