Homeಮುಖಪುಟಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

- Advertisement -
- Advertisement -

ಜುಲೈ ಮಧ್ಯದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿಯ ಹಿರಿಯರ ನಾಯಕರು ಪ್ರಶಂಸಿಸುತ್ತಿದ್ದಾರೆ. ಮೊದಲಿಗೆ, ಉತ್ತರ ಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟನ್ನು ಯೋಗಿ ನಿರ್ವಹಿಸುತ್ತಿರುವ ಕ್ರಮ “ಸಾಟಿಯಿಲ್ಲದ್ದು” ಎಂದು ಪ್ರಧಾನಿ ಮೋದಿ ಹೇಳಿದ್ದರು. ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಿದ್ದಕ್ಕಾಗಿ ಆದಿತ್ಯನಾಥ್ ಅವರನ್ನು ಅಭಿನಂದಿಸುತ್ತೇವೆ ಎಂದು ಹೇಳಿದ್ದರು.

ಇನ್ನು, ಕಳೆದ ವಾರ, ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ದೇಶದ “ಉನ್ನತ” ರಾಜ್ಯವಾಗಿ ನಿರ್ಮಾಣವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲಿ ಬಿಜೆಪಿಯ ಈ ಹೊಗಳುವಿಕೆಯ ಹಿಂದೆ ಸ್ಪಷ್ಟ ಸಂದೇಶವಿದೆ. ಅದು, ಕೇಸರಿ ಉಡುಪು ಧರಿಸಿದ ಸನ್ಯಾಸಿಯು ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಮರು ಚುನಾಯಿತರಾಗಲು, ಅವರಿಗೆ ಬಿಜೆಪಿ ಭಾರೀ ಪ್ರಚಾರ ನಡೆಸುತ್ತಿದೆ.

ಆದಿತ್ಯನಾಥ್ ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ, ಇದು ಕೇವಲ ಅನಿವಾರ್ಯ ಮತ್ತು ಸಹಜ ಎಂದು ವಾದಿಸಬಹುದು. ಆದಾಗ್ಯೂ, ಇದು ಜುಲೈ ಆರಂಭದವರೆಗೂ ಪೂರ್ವನಿರ್ಧರಿತ ತೀರ್ಮಾನವಾಗಿ ಉಳಿದಿರಲಿಲ್ಲ.

ಆದಿತ್ಯನಾಥ್‌ ಪಾಲಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳು ವಿವಿಧ ಕ್ಷೇತ್ರಗಳಲ್ಲಿ ಪ್ರಕ್ಷುಬ್ಧತೆಯಿಂದ ಕೂಡಿತ್ತು. ಕೊರೊನಾ 2ನೇ ಅಲೆಯನ್ನು ಅವರು ಸರಿಯಾಗಿ ನಿರ್ವಹಿಸಲಾಗಲಿಲ್ಲ. ಹೀಗಾಗಿ, ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದೇ ವೇಳೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳಪೆ ಸಾಧನೆ ಮಾಡಿದರು. ಇದು ಬಿಜೆಪಿಯ ಉನ್ನತ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಇದೆಲ್ಲರ ನಡುವೆ, ಮೋದಿಯೊಂದಿಗಿನ ಅವರ ಆಪ್ತ ಮಾಜಿ ಅಧಿಕಾರಿಗಳನ್ನು ರಾಜ್ಯ ಕ್ಯಾಬಿನೆಟ್‌ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು. ಅನೇಕರು ಇದನ್ನು ಆಪ್ತರ ನಡುವಿನ ಶಕ್ತಿಯ ಜಗಳವಾಗಿ ನೋಡಿದರು. ಇದು ಆದಿತ್ಯನಾಥ್ ಅವರನ್ನು ವಜಾಗೊಳಿಸುವ ಸಾಧ್ಯತೆಯವರೆಗೂ ಬೆಳೆದಿತ್ತು.

ಈ ಹಿನ್ನೆಲೆಯಲ್ಲಿ, ಕಳೆದ ಎರಡು ವಾರಗಳಲ್ಲಿ ಬಿಜೆಪಿಯ ಎಲ್ಲರಿಂದಲೂ ಆದಿತ್ಯನಾಥ್‌ ಬಗ್ಗೆ ಹೊಗಳಿಕೆಗಳ ಸುರಿಮಳೆ ಆರಂಭವಾಗಿದೆ. ಇದು ಸ್ವಲ್ಪ ಕುತೂಹಲಕಾರಿಯೂ ಆಗಿದೆ. ಅದಕ್ಕಿಂತ ಹೆಚ್ಚಾಗಿ ಇತ್ತೀಚಿನ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವ ಪರಿಪಾಠದಿಂದ ದೂರ ಉಳಿದಿದೆ.

ಆದರೂ, ಇತ್ತೀಚಿನ ದಿನಗಳಲ್ಲಿ ತನ್ನ ಇಮೇಜ್‌ ಅನ್ನು ಕಳೆದುಕೊಂಡ ಆದಿತ್ಯನಾಥ್‌ ಅವರಿಗೆ ಬಿಜೆಪಿ ಭಾರೀ ಒತ್ತು ಕೊಡುತ್ತಿರುವುದು ಏಕೆ..?

ಪ್ರಭಾವ ಕುಸಿತವನ್ನು ಮೇಲೆತ್ತುವ ಅಭಿಯಾನ?

ಕೆಲವು ರಾಜಕೀಯ ವೀಕ್ಷಕರು ಯೋಗಿಯ ಆಡಳಿತದ ದಾಖಲೆಯೇ ಬಿಜೆಪಿಯನ್ನು ಮತ್ತೆ ಅವರ ಮೇಲೆ ಒಲವು ಮೂಡಿಸಿದೆ ಎಂದು ಹೇಳುತ್ತಿದ್ದಾರೆ. ಆದಿತ್ಯನಾಥ್ ಅವರನ್ನು ಮೇಲುತ್ತುವ ನಿರ್ಧಾರವು, ದೇಶದ ಆರ್ಥಿಕತೆಯು ಕುಸಿಯುತ್ತಿರುವ ದಿನಗಳಲ್ಲಿ ಹಿಂದುತ್ವದ ರಾಜಕೀಯದ ಮೇಲೆ ಬಿಜೆಪಿ ಮತ್ತಷ್ಟು ಕೇಂದ್ರಕರಿಸುತ್ತಿದೆ ಎಂದು ಅವರು ಹೇಳುತ್ತಾರೆ.

“ಆರ್ಥಿಕತೆಯು ಕೆಟ್ಟದಾಗಿದೆ, ಉದ್ಯೋಗವಿಲ್ಲ, ರೈತರು ಅಸಮಾಧಾನಗೊಂಡಿದ್ದಾರೆ ಮತ್ತು ಕೊರೊನಾ ಸೋಂಕು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸಿದೆ” ಎಂದು ಅಲಹಾಬಾದ್ ವಿಶ್ವವಿದ್ಯಾಲಯದ ಜಿಬಿ ಪಂತ್ ಸಾಮಾಜಿಕ ವಿಜ್ಞಾನ ಸಂಸ್ಥೆಯ ಬೋಧಕ ಸತೇಂದ್ರ ಕುಮಾರ್ ಹೇಳಿದ್ದಾರೆ.

“ಹಾಗಾದರೆ ನೀವು ಏನು ಮಾಡುತ್ತೀರಿ? ನೀವು ದೇವಸ್ಥಾನಗಳನ್ನು ಕಟ್ಟುತ್ತಿದ್ದೀರಿ. ಹಿಂದೂಗಳನ್ನು ಮುಸ್ಲಿಮರಿಂದ ರಕ್ಷಿಸುತ್ತಿದ್ದೀರಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಹಿಂದೂತ್ವದ ಮೇಲೆ ಕೇಂದ್ರೀಕರಣವು ಅವರಿಗೆ ರಾಜಕೀಯ ಉಪಯೋಗ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಈ ತಂತ್ರದ ಆರಂಭಿಕ ಭಾಗವಾಗಿ ‘ಉತ್ತರ ಪ್ರದೇಶ ಸರ್ಕಾರವು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವ ಯೋಜನೆಗಳನ್ನು ಘೋಷಿಸಿದೆ. ಇದು ಹೆಚ್ಚು ಮಕ್ಕಳನ್ನು ಹೊಂದು ಮುಸ್ಲಿಮರ ವಿರುದ್ದ ಯೋಜನೆ ಎಂದು ಅವರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

“ಈ ಯೋಜನೆಯು ಮುಸ್ಲಿಂ ವಿರೋಧಿ ನಡೆ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಹಿಂದೂ ಮತದಾರರನ್ನು ಬಿಜೆಪಿಯತ್ತ ಪ್ರಚೋದಿಸುತ್ತದೆ. ಇದು ಯುಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದೂ ಮೇಲ್ಜಾತಿ ಮತಗಳನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಇತ್ತೀಚಿನ ಹಿನ್ನಡೆಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಬಿಜೆಪಿ ನಾಯಕರಾಗಿ ಉಳಿದಿದ್ದಾರೆ. ಅವರು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಒತ್ತು ಕೊಡಲಿದ್ದರೆ, ಬಿಜೆಪಿಗೇ ನಷ್ಟವೆಂದು ಕುಮಾರ್ ತಿಳಿಸಿದ್ದಾರೆ.

“ಯೋಗಿಯನ್ನು ತೆಗೆದುಹಾಕುವುದು ಸುಲಭವಲ್ಲ ಎಂದು ಬಿಜೆಪಿ ಅರಿತುಕೊಂಡಿದೆ. ಅವರು ಸಂಘ ಪರಿವಾರದಲ್ಲಿ ತನ್ನದೇ ಆದ ನೆಲೆಯನ್ನು ಹೊಂದಿದ್ದಾರೆ. ಚುನಾವಣೆಗಳು ಬಹುಸಂಖ್ಯಾತತೆಯ ಮೇಲೆ ನಡೆಯುವುದರಿಂದ ಅವರು ಬಿಜೆಪಿಗೆ ಅನಿವಾರ್ಯವಾಗಿದ್ದಾರೆ” ಎಂದು ಭಾರತದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನಿ ಮಿರ್ಜಾ ಅಸ್ಮರ್ ಬೇಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

“ದೆಹಲಿ ಬಿಜೆಪಿ ನಾಯಕತ್ವ ಮತ್ತು ಯೋಗಿ ನಡುವಿನ ವಿಷಯಗಳು ಸಂಪೂರ್ಣವಾಗಿ ಸರಿಯಾಗಿಲ್ಲ ಎಂಬುದು ಸ್ಪಷ್ಟ. ಆದರೂ, ರಾಜ್ಯದಲ್ಲಿ “ಮುಂದಿನ ಗುಂಪುಗಾರಿಕೆ”ಯನ್ನು ತಪ್ಪಿಸಲು ಸದ್ಯಕ್ಕೆ ಯೋಗಿಯನ್ನು ಸಮಾಧಾನಪಡಿಸಲು ಮೋದಿ ನಿರ್ಧರಿಸಿದ್ದಾರೆ. ಅದನ್ನು ರಾಜ್ಯದಲ್ಲಿ ಎಲ್ಲರಿಗೂ ಗೊತ್ತು ಪಡಿಸದಿದ್ದರೆ ವಿಷಯಗಳು ಬದಲಾಗಬಹುದು” ಎಂದು ರಾಜಕೀಯ ವಿಜ್ಞಾನಿ ಸುಹಾಸ್ ಪಾಲ್ಶಿಕರ್ ಹೇಳಿದ್ದಾರೆ.

” ಬಿಜೆಪಿ ನಾಯಕರು ಯೋಗಿಯೊಂದಿಗೆ ಶಾಂತಿಯನ್ನು ಖರೀದಿಸುತ್ತಿದ್ದಾರೆ. ಏಕೆಂದರೆ ಈ ಸಮಯದಲ್ಲಿ ಯಾವುದೇ ಪರ್ಯಾಯವಿಲ್ಲ. ಆದರೆ. ಇದೇ ಸಮಯದಲ್ಲಿಮುಂಬರುವ ಚುನಾವಣೆಗಳಲ್ಲಿ ಅವರ ಶಕ್ತಿ ಕಡಿಮೆಯಾಗುತ್ತದೆಯೇ ಎಂದು ನೀವು ನಿರೀಕ್ಷಿಸಿ ಮತ್ತು ನೋಡಿ” ಎಂದು ಪಾಲ್ಶಿಕರ್ ಹೇಳಿದ್ದಾರೆ.

“ಯೋಗಿ ಖಂಡಿತವಾಗಿಯೂ ಮೋದಿಗಿಂತ ದೊಡ್ಡ ಹಿಂದುತ್ವದ ಮ್ಯಾಸ್ಕಾಟ್ ಅಲ್ಲ. ಆದರೆ, ಪ್ರಧಾನಿಯನ್ನು ತನ್ನ ನಾಯಕ ಎಂದು ಬಿಂಬಿಸುವ ಮೂಲಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಗೆ ಸಾಧ್ಯವಿಲ್ಲ. ಉತ್ತರ ಪ್ರದೇಶದ ಚುನಾವಣಾ ಕಾವು 2014ರ ವರೆಗೂ ಮುಂದುವರೆಯಲಿದೆ. ಒಮ್ಮೆ ಅವರು ಉತ್ತರ ಪ್ರದೇಶವನ್ನು ಕಳೆದುಕೊಂಡರೆ, ಮತ್ತೆ ಅದನ್ನು ಪಡೆದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ಸತೀಶ್ ಪ್ರಕಾಶ್ ಹೇಳಿದ್ದಾರೆ.

ಮೂಲ: ಸ್ಕ್ರೋಲ್‌.ಇನ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...