Homeಮುಖಪುಟಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

- Advertisement -
- Advertisement -

ಜುಲೈ ಮಧ್ಯದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿಯ ಹಿರಿಯರ ನಾಯಕರು ಪ್ರಶಂಸಿಸುತ್ತಿದ್ದಾರೆ. ಮೊದಲಿಗೆ, ಉತ್ತರ ಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟನ್ನು ಯೋಗಿ ನಿರ್ವಹಿಸುತ್ತಿರುವ ಕ್ರಮ “ಸಾಟಿಯಿಲ್ಲದ್ದು” ಎಂದು ಪ್ರಧಾನಿ ಮೋದಿ ಹೇಳಿದ್ದರು. ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಿದ್ದಕ್ಕಾಗಿ ಆದಿತ್ಯನಾಥ್ ಅವರನ್ನು ಅಭಿನಂದಿಸುತ್ತೇವೆ ಎಂದು ಹೇಳಿದ್ದರು.

ಇನ್ನು, ಕಳೆದ ವಾರ, ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ದೇಶದ “ಉನ್ನತ” ರಾಜ್ಯವಾಗಿ ನಿರ್ಮಾಣವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲಿ ಬಿಜೆಪಿಯ ಈ ಹೊಗಳುವಿಕೆಯ ಹಿಂದೆ ಸ್ಪಷ್ಟ ಸಂದೇಶವಿದೆ. ಅದು, ಕೇಸರಿ ಉಡುಪು ಧರಿಸಿದ ಸನ್ಯಾಸಿಯು ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಮರು ಚುನಾಯಿತರಾಗಲು, ಅವರಿಗೆ ಬಿಜೆಪಿ ಭಾರೀ ಪ್ರಚಾರ ನಡೆಸುತ್ತಿದೆ.

ಆದಿತ್ಯನಾಥ್ ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ, ಇದು ಕೇವಲ ಅನಿವಾರ್ಯ ಮತ್ತು ಸಹಜ ಎಂದು ವಾದಿಸಬಹುದು. ಆದಾಗ್ಯೂ, ಇದು ಜುಲೈ ಆರಂಭದವರೆಗೂ ಪೂರ್ವನಿರ್ಧರಿತ ತೀರ್ಮಾನವಾಗಿ ಉಳಿದಿರಲಿಲ್ಲ.

ಆದಿತ್ಯನಾಥ್‌ ಪಾಲಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳು ವಿವಿಧ ಕ್ಷೇತ್ರಗಳಲ್ಲಿ ಪ್ರಕ್ಷುಬ್ಧತೆಯಿಂದ ಕೂಡಿತ್ತು. ಕೊರೊನಾ 2ನೇ ಅಲೆಯನ್ನು ಅವರು ಸರಿಯಾಗಿ ನಿರ್ವಹಿಸಲಾಗಲಿಲ್ಲ. ಹೀಗಾಗಿ, ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದೇ ವೇಳೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳಪೆ ಸಾಧನೆ ಮಾಡಿದರು. ಇದು ಬಿಜೆಪಿಯ ಉನ್ನತ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಇದೆಲ್ಲರ ನಡುವೆ, ಮೋದಿಯೊಂದಿಗಿನ ಅವರ ಆಪ್ತ ಮಾಜಿ ಅಧಿಕಾರಿಗಳನ್ನು ರಾಜ್ಯ ಕ್ಯಾಬಿನೆಟ್‌ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು. ಅನೇಕರು ಇದನ್ನು ಆಪ್ತರ ನಡುವಿನ ಶಕ್ತಿಯ ಜಗಳವಾಗಿ ನೋಡಿದರು. ಇದು ಆದಿತ್ಯನಾಥ್ ಅವರನ್ನು ವಜಾಗೊಳಿಸುವ ಸಾಧ್ಯತೆಯವರೆಗೂ ಬೆಳೆದಿತ್ತು.

ಈ ಹಿನ್ನೆಲೆಯಲ್ಲಿ, ಕಳೆದ ಎರಡು ವಾರಗಳಲ್ಲಿ ಬಿಜೆಪಿಯ ಎಲ್ಲರಿಂದಲೂ ಆದಿತ್ಯನಾಥ್‌ ಬಗ್ಗೆ ಹೊಗಳಿಕೆಗಳ ಸುರಿಮಳೆ ಆರಂಭವಾಗಿದೆ. ಇದು ಸ್ವಲ್ಪ ಕುತೂಹಲಕಾರಿಯೂ ಆಗಿದೆ. ಅದಕ್ಕಿಂತ ಹೆಚ್ಚಾಗಿ ಇತ್ತೀಚಿನ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವ ಪರಿಪಾಠದಿಂದ ದೂರ ಉಳಿದಿದೆ.

ಆದರೂ, ಇತ್ತೀಚಿನ ದಿನಗಳಲ್ಲಿ ತನ್ನ ಇಮೇಜ್‌ ಅನ್ನು ಕಳೆದುಕೊಂಡ ಆದಿತ್ಯನಾಥ್‌ ಅವರಿಗೆ ಬಿಜೆಪಿ ಭಾರೀ ಒತ್ತು ಕೊಡುತ್ತಿರುವುದು ಏಕೆ..?

ಪ್ರಭಾವ ಕುಸಿತವನ್ನು ಮೇಲೆತ್ತುವ ಅಭಿಯಾನ?

ಕೆಲವು ರಾಜಕೀಯ ವೀಕ್ಷಕರು ಯೋಗಿಯ ಆಡಳಿತದ ದಾಖಲೆಯೇ ಬಿಜೆಪಿಯನ್ನು ಮತ್ತೆ ಅವರ ಮೇಲೆ ಒಲವು ಮೂಡಿಸಿದೆ ಎಂದು ಹೇಳುತ್ತಿದ್ದಾರೆ. ಆದಿತ್ಯನಾಥ್ ಅವರನ್ನು ಮೇಲುತ್ತುವ ನಿರ್ಧಾರವು, ದೇಶದ ಆರ್ಥಿಕತೆಯು ಕುಸಿಯುತ್ತಿರುವ ದಿನಗಳಲ್ಲಿ ಹಿಂದುತ್ವದ ರಾಜಕೀಯದ ಮೇಲೆ ಬಿಜೆಪಿ ಮತ್ತಷ್ಟು ಕೇಂದ್ರಕರಿಸುತ್ತಿದೆ ಎಂದು ಅವರು ಹೇಳುತ್ತಾರೆ.

“ಆರ್ಥಿಕತೆಯು ಕೆಟ್ಟದಾಗಿದೆ, ಉದ್ಯೋಗವಿಲ್ಲ, ರೈತರು ಅಸಮಾಧಾನಗೊಂಡಿದ್ದಾರೆ ಮತ್ತು ಕೊರೊನಾ ಸೋಂಕು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸಿದೆ” ಎಂದು ಅಲಹಾಬಾದ್ ವಿಶ್ವವಿದ್ಯಾಲಯದ ಜಿಬಿ ಪಂತ್ ಸಾಮಾಜಿಕ ವಿಜ್ಞಾನ ಸಂಸ್ಥೆಯ ಬೋಧಕ ಸತೇಂದ್ರ ಕುಮಾರ್ ಹೇಳಿದ್ದಾರೆ.

“ಹಾಗಾದರೆ ನೀವು ಏನು ಮಾಡುತ್ತೀರಿ? ನೀವು ದೇವಸ್ಥಾನಗಳನ್ನು ಕಟ್ಟುತ್ತಿದ್ದೀರಿ. ಹಿಂದೂಗಳನ್ನು ಮುಸ್ಲಿಮರಿಂದ ರಕ್ಷಿಸುತ್ತಿದ್ದೀರಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಹಿಂದೂತ್ವದ ಮೇಲೆ ಕೇಂದ್ರೀಕರಣವು ಅವರಿಗೆ ರಾಜಕೀಯ ಉಪಯೋಗ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಈ ತಂತ್ರದ ಆರಂಭಿಕ ಭಾಗವಾಗಿ ‘ಉತ್ತರ ಪ್ರದೇಶ ಸರ್ಕಾರವು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವ ಯೋಜನೆಗಳನ್ನು ಘೋಷಿಸಿದೆ. ಇದು ಹೆಚ್ಚು ಮಕ್ಕಳನ್ನು ಹೊಂದು ಮುಸ್ಲಿಮರ ವಿರುದ್ದ ಯೋಜನೆ ಎಂದು ಅವರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

“ಈ ಯೋಜನೆಯು ಮುಸ್ಲಿಂ ವಿರೋಧಿ ನಡೆ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಹಿಂದೂ ಮತದಾರರನ್ನು ಬಿಜೆಪಿಯತ್ತ ಪ್ರಚೋದಿಸುತ್ತದೆ. ಇದು ಯುಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದೂ ಮೇಲ್ಜಾತಿ ಮತಗಳನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಇತ್ತೀಚಿನ ಹಿನ್ನಡೆಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಬಿಜೆಪಿ ನಾಯಕರಾಗಿ ಉಳಿದಿದ್ದಾರೆ. ಅವರು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಒತ್ತು ಕೊಡಲಿದ್ದರೆ, ಬಿಜೆಪಿಗೇ ನಷ್ಟವೆಂದು ಕುಮಾರ್ ತಿಳಿಸಿದ್ದಾರೆ.

“ಯೋಗಿಯನ್ನು ತೆಗೆದುಹಾಕುವುದು ಸುಲಭವಲ್ಲ ಎಂದು ಬಿಜೆಪಿ ಅರಿತುಕೊಂಡಿದೆ. ಅವರು ಸಂಘ ಪರಿವಾರದಲ್ಲಿ ತನ್ನದೇ ಆದ ನೆಲೆಯನ್ನು ಹೊಂದಿದ್ದಾರೆ. ಚುನಾವಣೆಗಳು ಬಹುಸಂಖ್ಯಾತತೆಯ ಮೇಲೆ ನಡೆಯುವುದರಿಂದ ಅವರು ಬಿಜೆಪಿಗೆ ಅನಿವಾರ್ಯವಾಗಿದ್ದಾರೆ” ಎಂದು ಭಾರತದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನಿ ಮಿರ್ಜಾ ಅಸ್ಮರ್ ಬೇಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

“ದೆಹಲಿ ಬಿಜೆಪಿ ನಾಯಕತ್ವ ಮತ್ತು ಯೋಗಿ ನಡುವಿನ ವಿಷಯಗಳು ಸಂಪೂರ್ಣವಾಗಿ ಸರಿಯಾಗಿಲ್ಲ ಎಂಬುದು ಸ್ಪಷ್ಟ. ಆದರೂ, ರಾಜ್ಯದಲ್ಲಿ “ಮುಂದಿನ ಗುಂಪುಗಾರಿಕೆ”ಯನ್ನು ತಪ್ಪಿಸಲು ಸದ್ಯಕ್ಕೆ ಯೋಗಿಯನ್ನು ಸಮಾಧಾನಪಡಿಸಲು ಮೋದಿ ನಿರ್ಧರಿಸಿದ್ದಾರೆ. ಅದನ್ನು ರಾಜ್ಯದಲ್ಲಿ ಎಲ್ಲರಿಗೂ ಗೊತ್ತು ಪಡಿಸದಿದ್ದರೆ ವಿಷಯಗಳು ಬದಲಾಗಬಹುದು” ಎಂದು ರಾಜಕೀಯ ವಿಜ್ಞಾನಿ ಸುಹಾಸ್ ಪಾಲ್ಶಿಕರ್ ಹೇಳಿದ್ದಾರೆ.

” ಬಿಜೆಪಿ ನಾಯಕರು ಯೋಗಿಯೊಂದಿಗೆ ಶಾಂತಿಯನ್ನು ಖರೀದಿಸುತ್ತಿದ್ದಾರೆ. ಏಕೆಂದರೆ ಈ ಸಮಯದಲ್ಲಿ ಯಾವುದೇ ಪರ್ಯಾಯವಿಲ್ಲ. ಆದರೆ. ಇದೇ ಸಮಯದಲ್ಲಿಮುಂಬರುವ ಚುನಾವಣೆಗಳಲ್ಲಿ ಅವರ ಶಕ್ತಿ ಕಡಿಮೆಯಾಗುತ್ತದೆಯೇ ಎಂದು ನೀವು ನಿರೀಕ್ಷಿಸಿ ಮತ್ತು ನೋಡಿ” ಎಂದು ಪಾಲ್ಶಿಕರ್ ಹೇಳಿದ್ದಾರೆ.

“ಯೋಗಿ ಖಂಡಿತವಾಗಿಯೂ ಮೋದಿಗಿಂತ ದೊಡ್ಡ ಹಿಂದುತ್ವದ ಮ್ಯಾಸ್ಕಾಟ್ ಅಲ್ಲ. ಆದರೆ, ಪ್ರಧಾನಿಯನ್ನು ತನ್ನ ನಾಯಕ ಎಂದು ಬಿಂಬಿಸುವ ಮೂಲಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಗೆ ಸಾಧ್ಯವಿಲ್ಲ. ಉತ್ತರ ಪ್ರದೇಶದ ಚುನಾವಣಾ ಕಾವು 2014ರ ವರೆಗೂ ಮುಂದುವರೆಯಲಿದೆ. ಒಮ್ಮೆ ಅವರು ಉತ್ತರ ಪ್ರದೇಶವನ್ನು ಕಳೆದುಕೊಂಡರೆ, ಮತ್ತೆ ಅದನ್ನು ಪಡೆದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ಸತೀಶ್ ಪ್ರಕಾಶ್ ಹೇಳಿದ್ದಾರೆ.

ಮೂಲ: ಸ್ಕ್ರೋಲ್‌.ಇನ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...