Homeಮುಖಪುಟಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

- Advertisement -
- Advertisement -

ಜುಲೈ ಮಧ್ಯದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿಯ ಹಿರಿಯರ ನಾಯಕರು ಪ್ರಶಂಸಿಸುತ್ತಿದ್ದಾರೆ. ಮೊದಲಿಗೆ, ಉತ್ತರ ಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟನ್ನು ಯೋಗಿ ನಿರ್ವಹಿಸುತ್ತಿರುವ ಕ್ರಮ “ಸಾಟಿಯಿಲ್ಲದ್ದು” ಎಂದು ಪ್ರಧಾನಿ ಮೋದಿ ಹೇಳಿದ್ದರು. ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಿದ್ದಕ್ಕಾಗಿ ಆದಿತ್ಯನಾಥ್ ಅವರನ್ನು ಅಭಿನಂದಿಸುತ್ತೇವೆ ಎಂದು ಹೇಳಿದ್ದರು.

ಇನ್ನು, ಕಳೆದ ವಾರ, ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ದೇಶದ “ಉನ್ನತ” ರಾಜ್ಯವಾಗಿ ನಿರ್ಮಾಣವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲಿ ಬಿಜೆಪಿಯ ಈ ಹೊಗಳುವಿಕೆಯ ಹಿಂದೆ ಸ್ಪಷ್ಟ ಸಂದೇಶವಿದೆ. ಅದು, ಕೇಸರಿ ಉಡುಪು ಧರಿಸಿದ ಸನ್ಯಾಸಿಯು ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಮರು ಚುನಾಯಿತರಾಗಲು, ಅವರಿಗೆ ಬಿಜೆಪಿ ಭಾರೀ ಪ್ರಚಾರ ನಡೆಸುತ್ತಿದೆ.

ಆದಿತ್ಯನಾಥ್ ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ, ಇದು ಕೇವಲ ಅನಿವಾರ್ಯ ಮತ್ತು ಸಹಜ ಎಂದು ವಾದಿಸಬಹುದು. ಆದಾಗ್ಯೂ, ಇದು ಜುಲೈ ಆರಂಭದವರೆಗೂ ಪೂರ್ವನಿರ್ಧರಿತ ತೀರ್ಮಾನವಾಗಿ ಉಳಿದಿರಲಿಲ್ಲ.

ಆದಿತ್ಯನಾಥ್‌ ಪಾಲಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳು ವಿವಿಧ ಕ್ಷೇತ್ರಗಳಲ್ಲಿ ಪ್ರಕ್ಷುಬ್ಧತೆಯಿಂದ ಕೂಡಿತ್ತು. ಕೊರೊನಾ 2ನೇ ಅಲೆಯನ್ನು ಅವರು ಸರಿಯಾಗಿ ನಿರ್ವಹಿಸಲಾಗಲಿಲ್ಲ. ಹೀಗಾಗಿ, ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದೇ ವೇಳೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳಪೆ ಸಾಧನೆ ಮಾಡಿದರು. ಇದು ಬಿಜೆಪಿಯ ಉನ್ನತ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಇದೆಲ್ಲರ ನಡುವೆ, ಮೋದಿಯೊಂದಿಗಿನ ಅವರ ಆಪ್ತ ಮಾಜಿ ಅಧಿಕಾರಿಗಳನ್ನು ರಾಜ್ಯ ಕ್ಯಾಬಿನೆಟ್‌ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು. ಅನೇಕರು ಇದನ್ನು ಆಪ್ತರ ನಡುವಿನ ಶಕ್ತಿಯ ಜಗಳವಾಗಿ ನೋಡಿದರು. ಇದು ಆದಿತ್ಯನಾಥ್ ಅವರನ್ನು ವಜಾಗೊಳಿಸುವ ಸಾಧ್ಯತೆಯವರೆಗೂ ಬೆಳೆದಿತ್ತು.

ಈ ಹಿನ್ನೆಲೆಯಲ್ಲಿ, ಕಳೆದ ಎರಡು ವಾರಗಳಲ್ಲಿ ಬಿಜೆಪಿಯ ಎಲ್ಲರಿಂದಲೂ ಆದಿತ್ಯನಾಥ್‌ ಬಗ್ಗೆ ಹೊಗಳಿಕೆಗಳ ಸುರಿಮಳೆ ಆರಂಭವಾಗಿದೆ. ಇದು ಸ್ವಲ್ಪ ಕುತೂಹಲಕಾರಿಯೂ ಆಗಿದೆ. ಅದಕ್ಕಿಂತ ಹೆಚ್ಚಾಗಿ ಇತ್ತೀಚಿನ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವ ಪರಿಪಾಠದಿಂದ ದೂರ ಉಳಿದಿದೆ.

ಆದರೂ, ಇತ್ತೀಚಿನ ದಿನಗಳಲ್ಲಿ ತನ್ನ ಇಮೇಜ್‌ ಅನ್ನು ಕಳೆದುಕೊಂಡ ಆದಿತ್ಯನಾಥ್‌ ಅವರಿಗೆ ಬಿಜೆಪಿ ಭಾರೀ ಒತ್ತು ಕೊಡುತ್ತಿರುವುದು ಏಕೆ..?

ಪ್ರಭಾವ ಕುಸಿತವನ್ನು ಮೇಲೆತ್ತುವ ಅಭಿಯಾನ?

ಕೆಲವು ರಾಜಕೀಯ ವೀಕ್ಷಕರು ಯೋಗಿಯ ಆಡಳಿತದ ದಾಖಲೆಯೇ ಬಿಜೆಪಿಯನ್ನು ಮತ್ತೆ ಅವರ ಮೇಲೆ ಒಲವು ಮೂಡಿಸಿದೆ ಎಂದು ಹೇಳುತ್ತಿದ್ದಾರೆ. ಆದಿತ್ಯನಾಥ್ ಅವರನ್ನು ಮೇಲುತ್ತುವ ನಿರ್ಧಾರವು, ದೇಶದ ಆರ್ಥಿಕತೆಯು ಕುಸಿಯುತ್ತಿರುವ ದಿನಗಳಲ್ಲಿ ಹಿಂದುತ್ವದ ರಾಜಕೀಯದ ಮೇಲೆ ಬಿಜೆಪಿ ಮತ್ತಷ್ಟು ಕೇಂದ್ರಕರಿಸುತ್ತಿದೆ ಎಂದು ಅವರು ಹೇಳುತ್ತಾರೆ.

“ಆರ್ಥಿಕತೆಯು ಕೆಟ್ಟದಾಗಿದೆ, ಉದ್ಯೋಗವಿಲ್ಲ, ರೈತರು ಅಸಮಾಧಾನಗೊಂಡಿದ್ದಾರೆ ಮತ್ತು ಕೊರೊನಾ ಸೋಂಕು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸಿದೆ” ಎಂದು ಅಲಹಾಬಾದ್ ವಿಶ್ವವಿದ್ಯಾಲಯದ ಜಿಬಿ ಪಂತ್ ಸಾಮಾಜಿಕ ವಿಜ್ಞಾನ ಸಂಸ್ಥೆಯ ಬೋಧಕ ಸತೇಂದ್ರ ಕುಮಾರ್ ಹೇಳಿದ್ದಾರೆ.

“ಹಾಗಾದರೆ ನೀವು ಏನು ಮಾಡುತ್ತೀರಿ? ನೀವು ದೇವಸ್ಥಾನಗಳನ್ನು ಕಟ್ಟುತ್ತಿದ್ದೀರಿ. ಹಿಂದೂಗಳನ್ನು ಮುಸ್ಲಿಮರಿಂದ ರಕ್ಷಿಸುತ್ತಿದ್ದೀರಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಹಿಂದೂತ್ವದ ಮೇಲೆ ಕೇಂದ್ರೀಕರಣವು ಅವರಿಗೆ ರಾಜಕೀಯ ಉಪಯೋಗ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಈ ತಂತ್ರದ ಆರಂಭಿಕ ಭಾಗವಾಗಿ ‘ಉತ್ತರ ಪ್ರದೇಶ ಸರ್ಕಾರವು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವ ಯೋಜನೆಗಳನ್ನು ಘೋಷಿಸಿದೆ. ಇದು ಹೆಚ್ಚು ಮಕ್ಕಳನ್ನು ಹೊಂದು ಮುಸ್ಲಿಮರ ವಿರುದ್ದ ಯೋಜನೆ ಎಂದು ಅವರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

“ಈ ಯೋಜನೆಯು ಮುಸ್ಲಿಂ ವಿರೋಧಿ ನಡೆ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಹಿಂದೂ ಮತದಾರರನ್ನು ಬಿಜೆಪಿಯತ್ತ ಪ್ರಚೋದಿಸುತ್ತದೆ. ಇದು ಯುಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದೂ ಮೇಲ್ಜಾತಿ ಮತಗಳನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಇತ್ತೀಚಿನ ಹಿನ್ನಡೆಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಬಿಜೆಪಿ ನಾಯಕರಾಗಿ ಉಳಿದಿದ್ದಾರೆ. ಅವರು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಒತ್ತು ಕೊಡಲಿದ್ದರೆ, ಬಿಜೆಪಿಗೇ ನಷ್ಟವೆಂದು ಕುಮಾರ್ ತಿಳಿಸಿದ್ದಾರೆ.

“ಯೋಗಿಯನ್ನು ತೆಗೆದುಹಾಕುವುದು ಸುಲಭವಲ್ಲ ಎಂದು ಬಿಜೆಪಿ ಅರಿತುಕೊಂಡಿದೆ. ಅವರು ಸಂಘ ಪರಿವಾರದಲ್ಲಿ ತನ್ನದೇ ಆದ ನೆಲೆಯನ್ನು ಹೊಂದಿದ್ದಾರೆ. ಚುನಾವಣೆಗಳು ಬಹುಸಂಖ್ಯಾತತೆಯ ಮೇಲೆ ನಡೆಯುವುದರಿಂದ ಅವರು ಬಿಜೆಪಿಗೆ ಅನಿವಾರ್ಯವಾಗಿದ್ದಾರೆ” ಎಂದು ಭಾರತದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನಿ ಮಿರ್ಜಾ ಅಸ್ಮರ್ ಬೇಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

“ದೆಹಲಿ ಬಿಜೆಪಿ ನಾಯಕತ್ವ ಮತ್ತು ಯೋಗಿ ನಡುವಿನ ವಿಷಯಗಳು ಸಂಪೂರ್ಣವಾಗಿ ಸರಿಯಾಗಿಲ್ಲ ಎಂಬುದು ಸ್ಪಷ್ಟ. ಆದರೂ, ರಾಜ್ಯದಲ್ಲಿ “ಮುಂದಿನ ಗುಂಪುಗಾರಿಕೆ”ಯನ್ನು ತಪ್ಪಿಸಲು ಸದ್ಯಕ್ಕೆ ಯೋಗಿಯನ್ನು ಸಮಾಧಾನಪಡಿಸಲು ಮೋದಿ ನಿರ್ಧರಿಸಿದ್ದಾರೆ. ಅದನ್ನು ರಾಜ್ಯದಲ್ಲಿ ಎಲ್ಲರಿಗೂ ಗೊತ್ತು ಪಡಿಸದಿದ್ದರೆ ವಿಷಯಗಳು ಬದಲಾಗಬಹುದು” ಎಂದು ರಾಜಕೀಯ ವಿಜ್ಞಾನಿ ಸುಹಾಸ್ ಪಾಲ್ಶಿಕರ್ ಹೇಳಿದ್ದಾರೆ.

” ಬಿಜೆಪಿ ನಾಯಕರು ಯೋಗಿಯೊಂದಿಗೆ ಶಾಂತಿಯನ್ನು ಖರೀದಿಸುತ್ತಿದ್ದಾರೆ. ಏಕೆಂದರೆ ಈ ಸಮಯದಲ್ಲಿ ಯಾವುದೇ ಪರ್ಯಾಯವಿಲ್ಲ. ಆದರೆ. ಇದೇ ಸಮಯದಲ್ಲಿಮುಂಬರುವ ಚುನಾವಣೆಗಳಲ್ಲಿ ಅವರ ಶಕ್ತಿ ಕಡಿಮೆಯಾಗುತ್ತದೆಯೇ ಎಂದು ನೀವು ನಿರೀಕ್ಷಿಸಿ ಮತ್ತು ನೋಡಿ” ಎಂದು ಪಾಲ್ಶಿಕರ್ ಹೇಳಿದ್ದಾರೆ.

“ಯೋಗಿ ಖಂಡಿತವಾಗಿಯೂ ಮೋದಿಗಿಂತ ದೊಡ್ಡ ಹಿಂದುತ್ವದ ಮ್ಯಾಸ್ಕಾಟ್ ಅಲ್ಲ. ಆದರೆ, ಪ್ರಧಾನಿಯನ್ನು ತನ್ನ ನಾಯಕ ಎಂದು ಬಿಂಬಿಸುವ ಮೂಲಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಗೆ ಸಾಧ್ಯವಿಲ್ಲ. ಉತ್ತರ ಪ್ರದೇಶದ ಚುನಾವಣಾ ಕಾವು 2014ರ ವರೆಗೂ ಮುಂದುವರೆಯಲಿದೆ. ಒಮ್ಮೆ ಅವರು ಉತ್ತರ ಪ್ರದೇಶವನ್ನು ಕಳೆದುಕೊಂಡರೆ, ಮತ್ತೆ ಅದನ್ನು ಪಡೆದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ಸತೀಶ್ ಪ್ರಕಾಶ್ ಹೇಳಿದ್ದಾರೆ.

ಮೂಲ: ಸ್ಕ್ರೋಲ್‌.ಇನ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...