Homeಮುಖಪುಟಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

- Advertisement -
- Advertisement -

ಜುಲೈ ಮಧ್ಯದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿಯ ಹಿರಿಯರ ನಾಯಕರು ಪ್ರಶಂಸಿಸುತ್ತಿದ್ದಾರೆ. ಮೊದಲಿಗೆ, ಉತ್ತರ ಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟನ್ನು ಯೋಗಿ ನಿರ್ವಹಿಸುತ್ತಿರುವ ಕ್ರಮ “ಸಾಟಿಯಿಲ್ಲದ್ದು” ಎಂದು ಪ್ರಧಾನಿ ಮೋದಿ ಹೇಳಿದ್ದರು. ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಿದ್ದಕ್ಕಾಗಿ ಆದಿತ್ಯನಾಥ್ ಅವರನ್ನು ಅಭಿನಂದಿಸುತ್ತೇವೆ ಎಂದು ಹೇಳಿದ್ದರು.

ಇನ್ನು, ಕಳೆದ ವಾರ, ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ದೇಶದ “ಉನ್ನತ” ರಾಜ್ಯವಾಗಿ ನಿರ್ಮಾಣವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲಿ ಬಿಜೆಪಿಯ ಈ ಹೊಗಳುವಿಕೆಯ ಹಿಂದೆ ಸ್ಪಷ್ಟ ಸಂದೇಶವಿದೆ. ಅದು, ಕೇಸರಿ ಉಡುಪು ಧರಿಸಿದ ಸನ್ಯಾಸಿಯು ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಮರು ಚುನಾಯಿತರಾಗಲು, ಅವರಿಗೆ ಬಿಜೆಪಿ ಭಾರೀ ಪ್ರಚಾರ ನಡೆಸುತ್ತಿದೆ.

ಆದಿತ್ಯನಾಥ್ ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ, ಇದು ಕೇವಲ ಅನಿವಾರ್ಯ ಮತ್ತು ಸಹಜ ಎಂದು ವಾದಿಸಬಹುದು. ಆದಾಗ್ಯೂ, ಇದು ಜುಲೈ ಆರಂಭದವರೆಗೂ ಪೂರ್ವನಿರ್ಧರಿತ ತೀರ್ಮಾನವಾಗಿ ಉಳಿದಿರಲಿಲ್ಲ.

ಆದಿತ್ಯನಾಥ್‌ ಪಾಲಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳು ವಿವಿಧ ಕ್ಷೇತ್ರಗಳಲ್ಲಿ ಪ್ರಕ್ಷುಬ್ಧತೆಯಿಂದ ಕೂಡಿತ್ತು. ಕೊರೊನಾ 2ನೇ ಅಲೆಯನ್ನು ಅವರು ಸರಿಯಾಗಿ ನಿರ್ವಹಿಸಲಾಗಲಿಲ್ಲ. ಹೀಗಾಗಿ, ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದೇ ವೇಳೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳಪೆ ಸಾಧನೆ ಮಾಡಿದರು. ಇದು ಬಿಜೆಪಿಯ ಉನ್ನತ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಇದೆಲ್ಲರ ನಡುವೆ, ಮೋದಿಯೊಂದಿಗಿನ ಅವರ ಆಪ್ತ ಮಾಜಿ ಅಧಿಕಾರಿಗಳನ್ನು ರಾಜ್ಯ ಕ್ಯಾಬಿನೆಟ್‌ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು. ಅನೇಕರು ಇದನ್ನು ಆಪ್ತರ ನಡುವಿನ ಶಕ್ತಿಯ ಜಗಳವಾಗಿ ನೋಡಿದರು. ಇದು ಆದಿತ್ಯನಾಥ್ ಅವರನ್ನು ವಜಾಗೊಳಿಸುವ ಸಾಧ್ಯತೆಯವರೆಗೂ ಬೆಳೆದಿತ್ತು.

ಈ ಹಿನ್ನೆಲೆಯಲ್ಲಿ, ಕಳೆದ ಎರಡು ವಾರಗಳಲ್ಲಿ ಬಿಜೆಪಿಯ ಎಲ್ಲರಿಂದಲೂ ಆದಿತ್ಯನಾಥ್‌ ಬಗ್ಗೆ ಹೊಗಳಿಕೆಗಳ ಸುರಿಮಳೆ ಆರಂಭವಾಗಿದೆ. ಇದು ಸ್ವಲ್ಪ ಕುತೂಹಲಕಾರಿಯೂ ಆಗಿದೆ. ಅದಕ್ಕಿಂತ ಹೆಚ್ಚಾಗಿ ಇತ್ತೀಚಿನ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವ ಪರಿಪಾಠದಿಂದ ದೂರ ಉಳಿದಿದೆ.

ಆದರೂ, ಇತ್ತೀಚಿನ ದಿನಗಳಲ್ಲಿ ತನ್ನ ಇಮೇಜ್‌ ಅನ್ನು ಕಳೆದುಕೊಂಡ ಆದಿತ್ಯನಾಥ್‌ ಅವರಿಗೆ ಬಿಜೆಪಿ ಭಾರೀ ಒತ್ತು ಕೊಡುತ್ತಿರುವುದು ಏಕೆ..?

ಪ್ರಭಾವ ಕುಸಿತವನ್ನು ಮೇಲೆತ್ತುವ ಅಭಿಯಾನ?

ಕೆಲವು ರಾಜಕೀಯ ವೀಕ್ಷಕರು ಯೋಗಿಯ ಆಡಳಿತದ ದಾಖಲೆಯೇ ಬಿಜೆಪಿಯನ್ನು ಮತ್ತೆ ಅವರ ಮೇಲೆ ಒಲವು ಮೂಡಿಸಿದೆ ಎಂದು ಹೇಳುತ್ತಿದ್ದಾರೆ. ಆದಿತ್ಯನಾಥ್ ಅವರನ್ನು ಮೇಲುತ್ತುವ ನಿರ್ಧಾರವು, ದೇಶದ ಆರ್ಥಿಕತೆಯು ಕುಸಿಯುತ್ತಿರುವ ದಿನಗಳಲ್ಲಿ ಹಿಂದುತ್ವದ ರಾಜಕೀಯದ ಮೇಲೆ ಬಿಜೆಪಿ ಮತ್ತಷ್ಟು ಕೇಂದ್ರಕರಿಸುತ್ತಿದೆ ಎಂದು ಅವರು ಹೇಳುತ್ತಾರೆ.

“ಆರ್ಥಿಕತೆಯು ಕೆಟ್ಟದಾಗಿದೆ, ಉದ್ಯೋಗವಿಲ್ಲ, ರೈತರು ಅಸಮಾಧಾನಗೊಂಡಿದ್ದಾರೆ ಮತ್ತು ಕೊರೊನಾ ಸೋಂಕು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸಿದೆ” ಎಂದು ಅಲಹಾಬಾದ್ ವಿಶ್ವವಿದ್ಯಾಲಯದ ಜಿಬಿ ಪಂತ್ ಸಾಮಾಜಿಕ ವಿಜ್ಞಾನ ಸಂಸ್ಥೆಯ ಬೋಧಕ ಸತೇಂದ್ರ ಕುಮಾರ್ ಹೇಳಿದ್ದಾರೆ.

“ಹಾಗಾದರೆ ನೀವು ಏನು ಮಾಡುತ್ತೀರಿ? ನೀವು ದೇವಸ್ಥಾನಗಳನ್ನು ಕಟ್ಟುತ್ತಿದ್ದೀರಿ. ಹಿಂದೂಗಳನ್ನು ಮುಸ್ಲಿಮರಿಂದ ರಕ್ಷಿಸುತ್ತಿದ್ದೀರಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಹಿಂದೂತ್ವದ ಮೇಲೆ ಕೇಂದ್ರೀಕರಣವು ಅವರಿಗೆ ರಾಜಕೀಯ ಉಪಯೋಗ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಈ ತಂತ್ರದ ಆರಂಭಿಕ ಭಾಗವಾಗಿ ‘ಉತ್ತರ ಪ್ರದೇಶ ಸರ್ಕಾರವು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವ ಯೋಜನೆಗಳನ್ನು ಘೋಷಿಸಿದೆ. ಇದು ಹೆಚ್ಚು ಮಕ್ಕಳನ್ನು ಹೊಂದು ಮುಸ್ಲಿಮರ ವಿರುದ್ದ ಯೋಜನೆ ಎಂದು ಅವರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

“ಈ ಯೋಜನೆಯು ಮುಸ್ಲಿಂ ವಿರೋಧಿ ನಡೆ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಹಿಂದೂ ಮತದಾರರನ್ನು ಬಿಜೆಪಿಯತ್ತ ಪ್ರಚೋದಿಸುತ್ತದೆ. ಇದು ಯುಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದೂ ಮೇಲ್ಜಾತಿ ಮತಗಳನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಇತ್ತೀಚಿನ ಹಿನ್ನಡೆಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಬಿಜೆಪಿ ನಾಯಕರಾಗಿ ಉಳಿದಿದ್ದಾರೆ. ಅವರು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಒತ್ತು ಕೊಡಲಿದ್ದರೆ, ಬಿಜೆಪಿಗೇ ನಷ್ಟವೆಂದು ಕುಮಾರ್ ತಿಳಿಸಿದ್ದಾರೆ.

“ಯೋಗಿಯನ್ನು ತೆಗೆದುಹಾಕುವುದು ಸುಲಭವಲ್ಲ ಎಂದು ಬಿಜೆಪಿ ಅರಿತುಕೊಂಡಿದೆ. ಅವರು ಸಂಘ ಪರಿವಾರದಲ್ಲಿ ತನ್ನದೇ ಆದ ನೆಲೆಯನ್ನು ಹೊಂದಿದ್ದಾರೆ. ಚುನಾವಣೆಗಳು ಬಹುಸಂಖ್ಯಾತತೆಯ ಮೇಲೆ ನಡೆಯುವುದರಿಂದ ಅವರು ಬಿಜೆಪಿಗೆ ಅನಿವಾರ್ಯವಾಗಿದ್ದಾರೆ” ಎಂದು ಭಾರತದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನಿ ಮಿರ್ಜಾ ಅಸ್ಮರ್ ಬೇಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

“ದೆಹಲಿ ಬಿಜೆಪಿ ನಾಯಕತ್ವ ಮತ್ತು ಯೋಗಿ ನಡುವಿನ ವಿಷಯಗಳು ಸಂಪೂರ್ಣವಾಗಿ ಸರಿಯಾಗಿಲ್ಲ ಎಂಬುದು ಸ್ಪಷ್ಟ. ಆದರೂ, ರಾಜ್ಯದಲ್ಲಿ “ಮುಂದಿನ ಗುಂಪುಗಾರಿಕೆ”ಯನ್ನು ತಪ್ಪಿಸಲು ಸದ್ಯಕ್ಕೆ ಯೋಗಿಯನ್ನು ಸಮಾಧಾನಪಡಿಸಲು ಮೋದಿ ನಿರ್ಧರಿಸಿದ್ದಾರೆ. ಅದನ್ನು ರಾಜ್ಯದಲ್ಲಿ ಎಲ್ಲರಿಗೂ ಗೊತ್ತು ಪಡಿಸದಿದ್ದರೆ ವಿಷಯಗಳು ಬದಲಾಗಬಹುದು” ಎಂದು ರಾಜಕೀಯ ವಿಜ್ಞಾನಿ ಸುಹಾಸ್ ಪಾಲ್ಶಿಕರ್ ಹೇಳಿದ್ದಾರೆ.

” ಬಿಜೆಪಿ ನಾಯಕರು ಯೋಗಿಯೊಂದಿಗೆ ಶಾಂತಿಯನ್ನು ಖರೀದಿಸುತ್ತಿದ್ದಾರೆ. ಏಕೆಂದರೆ ಈ ಸಮಯದಲ್ಲಿ ಯಾವುದೇ ಪರ್ಯಾಯವಿಲ್ಲ. ಆದರೆ. ಇದೇ ಸಮಯದಲ್ಲಿಮುಂಬರುವ ಚುನಾವಣೆಗಳಲ್ಲಿ ಅವರ ಶಕ್ತಿ ಕಡಿಮೆಯಾಗುತ್ತದೆಯೇ ಎಂದು ನೀವು ನಿರೀಕ್ಷಿಸಿ ಮತ್ತು ನೋಡಿ” ಎಂದು ಪಾಲ್ಶಿಕರ್ ಹೇಳಿದ್ದಾರೆ.

“ಯೋಗಿ ಖಂಡಿತವಾಗಿಯೂ ಮೋದಿಗಿಂತ ದೊಡ್ಡ ಹಿಂದುತ್ವದ ಮ್ಯಾಸ್ಕಾಟ್ ಅಲ್ಲ. ಆದರೆ, ಪ್ರಧಾನಿಯನ್ನು ತನ್ನ ನಾಯಕ ಎಂದು ಬಿಂಬಿಸುವ ಮೂಲಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಗೆ ಸಾಧ್ಯವಿಲ್ಲ. ಉತ್ತರ ಪ್ರದೇಶದ ಚುನಾವಣಾ ಕಾವು 2014ರ ವರೆಗೂ ಮುಂದುವರೆಯಲಿದೆ. ಒಮ್ಮೆ ಅವರು ಉತ್ತರ ಪ್ರದೇಶವನ್ನು ಕಳೆದುಕೊಂಡರೆ, ಮತ್ತೆ ಅದನ್ನು ಪಡೆದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ಸತೀಶ್ ಪ್ರಕಾಶ್ ಹೇಳಿದ್ದಾರೆ.

ಮೂಲ: ಸ್ಕ್ರೋಲ್‌.ಇನ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...