Homeಮುಖಪುಟಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಸಿಎಂ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

- Advertisement -
- Advertisement -

ಜುಲೈ ಮಧ್ಯದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿಯ ಹಿರಿಯರ ನಾಯಕರು ಪ್ರಶಂಸಿಸುತ್ತಿದ್ದಾರೆ. ಮೊದಲಿಗೆ, ಉತ್ತರ ಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟನ್ನು ಯೋಗಿ ನಿರ್ವಹಿಸುತ್ತಿರುವ ಕ್ರಮ “ಸಾಟಿಯಿಲ್ಲದ್ದು” ಎಂದು ಪ್ರಧಾನಿ ಮೋದಿ ಹೇಳಿದ್ದರು. ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಿದ್ದಕ್ಕಾಗಿ ಆದಿತ್ಯನಾಥ್ ಅವರನ್ನು ಅಭಿನಂದಿಸುತ್ತೇವೆ ಎಂದು ಹೇಳಿದ್ದರು.

ಇನ್ನು, ಕಳೆದ ವಾರ, ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ದೇಶದ “ಉನ್ನತ” ರಾಜ್ಯವಾಗಿ ನಿರ್ಮಾಣವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲಿ ಬಿಜೆಪಿಯ ಈ ಹೊಗಳುವಿಕೆಯ ಹಿಂದೆ ಸ್ಪಷ್ಟ ಸಂದೇಶವಿದೆ. ಅದು, ಕೇಸರಿ ಉಡುಪು ಧರಿಸಿದ ಸನ್ಯಾಸಿಯು ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಮರು ಚುನಾಯಿತರಾಗಲು, ಅವರಿಗೆ ಬಿಜೆಪಿ ಭಾರೀ ಪ್ರಚಾರ ನಡೆಸುತ್ತಿದೆ.

ಆದಿತ್ಯನಾಥ್ ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ, ಇದು ಕೇವಲ ಅನಿವಾರ್ಯ ಮತ್ತು ಸಹಜ ಎಂದು ವಾದಿಸಬಹುದು. ಆದಾಗ್ಯೂ, ಇದು ಜುಲೈ ಆರಂಭದವರೆಗೂ ಪೂರ್ವನಿರ್ಧರಿತ ತೀರ್ಮಾನವಾಗಿ ಉಳಿದಿರಲಿಲ್ಲ.

ಆದಿತ್ಯನಾಥ್‌ ಪಾಲಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳು ವಿವಿಧ ಕ್ಷೇತ್ರಗಳಲ್ಲಿ ಪ್ರಕ್ಷುಬ್ಧತೆಯಿಂದ ಕೂಡಿತ್ತು. ಕೊರೊನಾ 2ನೇ ಅಲೆಯನ್ನು ಅವರು ಸರಿಯಾಗಿ ನಿರ್ವಹಿಸಲಾಗಲಿಲ್ಲ. ಹೀಗಾಗಿ, ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದೇ ವೇಳೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳಪೆ ಸಾಧನೆ ಮಾಡಿದರು. ಇದು ಬಿಜೆಪಿಯ ಉನ್ನತ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಇದೆಲ್ಲರ ನಡುವೆ, ಮೋದಿಯೊಂದಿಗಿನ ಅವರ ಆಪ್ತ ಮಾಜಿ ಅಧಿಕಾರಿಗಳನ್ನು ರಾಜ್ಯ ಕ್ಯಾಬಿನೆಟ್‌ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು. ಅನೇಕರು ಇದನ್ನು ಆಪ್ತರ ನಡುವಿನ ಶಕ್ತಿಯ ಜಗಳವಾಗಿ ನೋಡಿದರು. ಇದು ಆದಿತ್ಯನಾಥ್ ಅವರನ್ನು ವಜಾಗೊಳಿಸುವ ಸಾಧ್ಯತೆಯವರೆಗೂ ಬೆಳೆದಿತ್ತು.

ಈ ಹಿನ್ನೆಲೆಯಲ್ಲಿ, ಕಳೆದ ಎರಡು ವಾರಗಳಲ್ಲಿ ಬಿಜೆಪಿಯ ಎಲ್ಲರಿಂದಲೂ ಆದಿತ್ಯನಾಥ್‌ ಬಗ್ಗೆ ಹೊಗಳಿಕೆಗಳ ಸುರಿಮಳೆ ಆರಂಭವಾಗಿದೆ. ಇದು ಸ್ವಲ್ಪ ಕುತೂಹಲಕಾರಿಯೂ ಆಗಿದೆ. ಅದಕ್ಕಿಂತ ಹೆಚ್ಚಾಗಿ ಇತ್ತೀಚಿನ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವ ಪರಿಪಾಠದಿಂದ ದೂರ ಉಳಿದಿದೆ.

ಆದರೂ, ಇತ್ತೀಚಿನ ದಿನಗಳಲ್ಲಿ ತನ್ನ ಇಮೇಜ್‌ ಅನ್ನು ಕಳೆದುಕೊಂಡ ಆದಿತ್ಯನಾಥ್‌ ಅವರಿಗೆ ಬಿಜೆಪಿ ಭಾರೀ ಒತ್ತು ಕೊಡುತ್ತಿರುವುದು ಏಕೆ..?

ಪ್ರಭಾವ ಕುಸಿತವನ್ನು ಮೇಲೆತ್ತುವ ಅಭಿಯಾನ?

ಕೆಲವು ರಾಜಕೀಯ ವೀಕ್ಷಕರು ಯೋಗಿಯ ಆಡಳಿತದ ದಾಖಲೆಯೇ ಬಿಜೆಪಿಯನ್ನು ಮತ್ತೆ ಅವರ ಮೇಲೆ ಒಲವು ಮೂಡಿಸಿದೆ ಎಂದು ಹೇಳುತ್ತಿದ್ದಾರೆ. ಆದಿತ್ಯನಾಥ್ ಅವರನ್ನು ಮೇಲುತ್ತುವ ನಿರ್ಧಾರವು, ದೇಶದ ಆರ್ಥಿಕತೆಯು ಕುಸಿಯುತ್ತಿರುವ ದಿನಗಳಲ್ಲಿ ಹಿಂದುತ್ವದ ರಾಜಕೀಯದ ಮೇಲೆ ಬಿಜೆಪಿ ಮತ್ತಷ್ಟು ಕೇಂದ್ರಕರಿಸುತ್ತಿದೆ ಎಂದು ಅವರು ಹೇಳುತ್ತಾರೆ.

“ಆರ್ಥಿಕತೆಯು ಕೆಟ್ಟದಾಗಿದೆ, ಉದ್ಯೋಗವಿಲ್ಲ, ರೈತರು ಅಸಮಾಧಾನಗೊಂಡಿದ್ದಾರೆ ಮತ್ತು ಕೊರೊನಾ ಸೋಂಕು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸಿದೆ” ಎಂದು ಅಲಹಾಬಾದ್ ವಿಶ್ವವಿದ್ಯಾಲಯದ ಜಿಬಿ ಪಂತ್ ಸಾಮಾಜಿಕ ವಿಜ್ಞಾನ ಸಂಸ್ಥೆಯ ಬೋಧಕ ಸತೇಂದ್ರ ಕುಮಾರ್ ಹೇಳಿದ್ದಾರೆ.

“ಹಾಗಾದರೆ ನೀವು ಏನು ಮಾಡುತ್ತೀರಿ? ನೀವು ದೇವಸ್ಥಾನಗಳನ್ನು ಕಟ್ಟುತ್ತಿದ್ದೀರಿ. ಹಿಂದೂಗಳನ್ನು ಮುಸ್ಲಿಮರಿಂದ ರಕ್ಷಿಸುತ್ತಿದ್ದೀರಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಹಿಂದೂತ್ವದ ಮೇಲೆ ಕೇಂದ್ರೀಕರಣವು ಅವರಿಗೆ ರಾಜಕೀಯ ಉಪಯೋಗ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಈ ತಂತ್ರದ ಆರಂಭಿಕ ಭಾಗವಾಗಿ ‘ಉತ್ತರ ಪ್ರದೇಶ ಸರ್ಕಾರವು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವ ಯೋಜನೆಗಳನ್ನು ಘೋಷಿಸಿದೆ. ಇದು ಹೆಚ್ಚು ಮಕ್ಕಳನ್ನು ಹೊಂದು ಮುಸ್ಲಿಮರ ವಿರುದ್ದ ಯೋಜನೆ ಎಂದು ಅವರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

“ಈ ಯೋಜನೆಯು ಮುಸ್ಲಿಂ ವಿರೋಧಿ ನಡೆ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಹಿಂದೂ ಮತದಾರರನ್ನು ಬಿಜೆಪಿಯತ್ತ ಪ್ರಚೋದಿಸುತ್ತದೆ. ಇದು ಯುಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದೂ ಮೇಲ್ಜಾತಿ ಮತಗಳನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಇತ್ತೀಚಿನ ಹಿನ್ನಡೆಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಬಿಜೆಪಿ ನಾಯಕರಾಗಿ ಉಳಿದಿದ್ದಾರೆ. ಅವರು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಒತ್ತು ಕೊಡಲಿದ್ದರೆ, ಬಿಜೆಪಿಗೇ ನಷ್ಟವೆಂದು ಕುಮಾರ್ ತಿಳಿಸಿದ್ದಾರೆ.

“ಯೋಗಿಯನ್ನು ತೆಗೆದುಹಾಕುವುದು ಸುಲಭವಲ್ಲ ಎಂದು ಬಿಜೆಪಿ ಅರಿತುಕೊಂಡಿದೆ. ಅವರು ಸಂಘ ಪರಿವಾರದಲ್ಲಿ ತನ್ನದೇ ಆದ ನೆಲೆಯನ್ನು ಹೊಂದಿದ್ದಾರೆ. ಚುನಾವಣೆಗಳು ಬಹುಸಂಖ್ಯಾತತೆಯ ಮೇಲೆ ನಡೆಯುವುದರಿಂದ ಅವರು ಬಿಜೆಪಿಗೆ ಅನಿವಾರ್ಯವಾಗಿದ್ದಾರೆ” ಎಂದು ಭಾರತದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನಿ ಮಿರ್ಜಾ ಅಸ್ಮರ್ ಬೇಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

“ದೆಹಲಿ ಬಿಜೆಪಿ ನಾಯಕತ್ವ ಮತ್ತು ಯೋಗಿ ನಡುವಿನ ವಿಷಯಗಳು ಸಂಪೂರ್ಣವಾಗಿ ಸರಿಯಾಗಿಲ್ಲ ಎಂಬುದು ಸ್ಪಷ್ಟ. ಆದರೂ, ರಾಜ್ಯದಲ್ಲಿ “ಮುಂದಿನ ಗುಂಪುಗಾರಿಕೆ”ಯನ್ನು ತಪ್ಪಿಸಲು ಸದ್ಯಕ್ಕೆ ಯೋಗಿಯನ್ನು ಸಮಾಧಾನಪಡಿಸಲು ಮೋದಿ ನಿರ್ಧರಿಸಿದ್ದಾರೆ. ಅದನ್ನು ರಾಜ್ಯದಲ್ಲಿ ಎಲ್ಲರಿಗೂ ಗೊತ್ತು ಪಡಿಸದಿದ್ದರೆ ವಿಷಯಗಳು ಬದಲಾಗಬಹುದು” ಎಂದು ರಾಜಕೀಯ ವಿಜ್ಞಾನಿ ಸುಹಾಸ್ ಪಾಲ್ಶಿಕರ್ ಹೇಳಿದ್ದಾರೆ.

” ಬಿಜೆಪಿ ನಾಯಕರು ಯೋಗಿಯೊಂದಿಗೆ ಶಾಂತಿಯನ್ನು ಖರೀದಿಸುತ್ತಿದ್ದಾರೆ. ಏಕೆಂದರೆ ಈ ಸಮಯದಲ್ಲಿ ಯಾವುದೇ ಪರ್ಯಾಯವಿಲ್ಲ. ಆದರೆ. ಇದೇ ಸಮಯದಲ್ಲಿಮುಂಬರುವ ಚುನಾವಣೆಗಳಲ್ಲಿ ಅವರ ಶಕ್ತಿ ಕಡಿಮೆಯಾಗುತ್ತದೆಯೇ ಎಂದು ನೀವು ನಿರೀಕ್ಷಿಸಿ ಮತ್ತು ನೋಡಿ” ಎಂದು ಪಾಲ್ಶಿಕರ್ ಹೇಳಿದ್ದಾರೆ.

“ಯೋಗಿ ಖಂಡಿತವಾಗಿಯೂ ಮೋದಿಗಿಂತ ದೊಡ್ಡ ಹಿಂದುತ್ವದ ಮ್ಯಾಸ್ಕಾಟ್ ಅಲ್ಲ. ಆದರೆ, ಪ್ರಧಾನಿಯನ್ನು ತನ್ನ ನಾಯಕ ಎಂದು ಬಿಂಬಿಸುವ ಮೂಲಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಗೆ ಸಾಧ್ಯವಿಲ್ಲ. ಉತ್ತರ ಪ್ರದೇಶದ ಚುನಾವಣಾ ಕಾವು 2014ರ ವರೆಗೂ ಮುಂದುವರೆಯಲಿದೆ. ಒಮ್ಮೆ ಅವರು ಉತ್ತರ ಪ್ರದೇಶವನ್ನು ಕಳೆದುಕೊಂಡರೆ, ಮತ್ತೆ ಅದನ್ನು ಪಡೆದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ಸತೀಶ್ ಪ್ರಕಾಶ್ ಹೇಳಿದ್ದಾರೆ.

ಮೂಲ: ಸ್ಕ್ರೋಲ್‌.ಇನ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...