Homeಮುಖಪುಟನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

RSS ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ?

- Advertisement -
- Advertisement -

ತುಮಕೂರಿನಲ್ಲಿ RSS ಕಟ್ಟಡ ಕಟ್ಟುತ್ತಿರುವ ವಿಷಯವನ್ನು ಸಂಸದ ಪ್ರತಾಪ್ ಸಿಂಹರವರು ಹಂಚಿಕೊಂಡ ಬೆನ್ನಲ್ಲೆ, ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ ಮತ್ತು ಹೇಗೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಮೈಸೂರು -ಕೊಡಗು ಸಂಸದರಾದ ಪ್ರತಾಪ್ ಸಿಂಹರವರು ನಿನ್ನೆ ಬೆಳಿಗ್ಗೆ ‘ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಆರ್ ಎಸ್ ಎಸ್ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಲಾಯಿತು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

RSS

“ವಿಧಾನ ಪರಿಷತ್ತಿನಲ್ಲಿ Question Hour ಸಮಯದಲ್ಲಿ RSS ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದೆ. ಆಗ RSS ಸಂಘ ನೊಂದಣೆಯಾಗಿಲ್ಲ ಹಾಗು ಯಾವುದೆ ಆಸ್ತಿ ಹೊಂದಿಲ್ಲ ಅನ್ನುವ ಮಾಹಿತಿಯನ್ನು ಸರ್ಕಾರ ನೀಡಿದೆ.
ಇನ್ನೊಂದು ಕಡೆ ಆರ್‌ಎಸ್‌ಎಸ್‌ ಹೊಸ ಕಟ್ಟಡದ ಬಗ್ಗೆ ಸಂಸದ ಪ್ರತಾಪ್ ಸಿಂಹರವರು ಮಾಹಿತಿ ಹಂಚಿಕೊಂಡಿದ್ದಾರೆ ಅಂದರೆ ಏನರ್ಥ” ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.

ಭಾರತದಲ್ಲಿನ NGO ಗಳ ಮೇಲೆ ಇಲ್ಲ ಸಲ್ಲದ ಕಾನೂನು ಏರಿ, ಅವುಗಳ ಲೆಕ್ಕಾಚಾರ ಕೇಳಿ ಅವುಗಳ ಮೇಲೆ income Tax ಮತ್ತು CBI / ED raid ಮಾಡುವ ಆಡಳಿತ ಸರ್ಕಾರ, ಆರ್‌ಎಸ್‌ಎಸ್‌ ಸಂಘಟನೆಯ ಲೆಕ್ಕಾಚಾರದ ಬಗ್ಗೆ ಯಾಕೆ ಪ್ರಶ್ನಿಸುವುದಿಲ್ಲ. ಯಾಕೆ ಈ ದ್ವಂದ್ವ ನಿಲುವು? ಈ ದೇಶದಲ್ಲಿನ ಕಾನೂನು ಸಾಮಾನ್ಯರಿಗೆ ಒಂದು ಮತ್ತು RSS ಸಂಘಟನೆಗೆ ಬೇರೆ ಇದೆಯೆ ಎಂದು ಪ್ರಶ್ನಿಸಿದ್ದಾರೆ.

RSS

ಸತ್ಯ, ಧರ್ಮ, ದೇಶಪ್ರೇಮದ ಬಗ್ಗೆ ಉಪದೇಶ ಕೊಟ್ಟು ಅಧಿಕಾರ ಹಿಡಿಯುವ ರೀತಿಯಲ್ಲಿ, ಆರ್‌ಎಸ್‌ಎಸ್‌ ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ? ಆದಾಯ ಖರ್ಚು ವೆಚ್ಚಗಳ ಬಗ್ಗೆ ಸರ್ಕಾರಕ್ಕೆ ಉತ್ತರದಾಯಿತ್ವ ಸಲ್ಲಿಸದ ಸಂಘಟನೆಗಳು ಸರ್ಕಾರಕ್ಕೆ ಅರ್ಥಾತ್ ಸಮಾಜಕ್ಕೆ ವಂಚಿಸಿದಂತೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಹರಿಪ್ರಸಾದ್‌ರವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಅಡಿಯಲ್ಲಿ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್‌ರವರಿಗೆ ಆರ್‌ಎಸ್‌ಎಸ್‌ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಅವರು, “ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ನೋಂದಣಿಯಾಗಿಲ್ಲ” ಎಂದು ಉತ್ತರಿಸಿದ್ದರು. ಇನ್ನು ಸ್ವಂತ ಆಸ್ತಿ ಅಥವಾ ಬಾಡಿಗೆ ಕಟ್ಟಡ ಇದೆಯೆ ಎಂಬ ಹಲವು ಪ್ರಶ್ನೆಗಳಿಗೆ ಅನ್ವಹಿಸುವುದಿಲ್ಲ ಎಂದು ಉತ್ತರಿಸಿದ್ದರು.

ಕೇಂದ್ರ ಸರ್ಕಾರವು ಹಲವು ಎನ್‌ಜಿಓಗಳ ಮೇಲೆ ದಾಳಿ ನಡೆಸುತ್ತಿದೆ. ಸರ್ಕಾರದ ಎನ್‌ಐಎ ಕಳೆದ ಒಂದು ವಾರದಲ್ಲಿಯೇ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಎನ್‌ಜಿಓ ಕಚೇರಿಗಳ ಮೇಲೆ ದಾಳಿ ನಡೆಸಿ ಲೆಕ್ಕಪತ್ರ ಶೋಧಿಸುತ್ತಿದೆ. ಸರ್ಕಾರಗಳ ಈ ದಾಳಿಯಿಂದ ಖ್ಯಾತ ಮಾನವ ಹಕ್ಕು ಸಂಸ್ಥೇಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಈ ಸಂದರ್ಭದಲ್ಲಿ ಹರಿಪ್ರಸಾದ್‌ರವರ ಪ್ರಶ್ನೆಗಳು ಬಂದಿವೆ.


ಇದನ್ನೂ ಓದಿ: ಮತ್ತೊಬ್ಬ RSS ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...