Homeಮುಖಪುಟನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

RSS ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ?

- Advertisement -
- Advertisement -

ತುಮಕೂರಿನಲ್ಲಿ RSS ಕಟ್ಟಡ ಕಟ್ಟುತ್ತಿರುವ ವಿಷಯವನ್ನು ಸಂಸದ ಪ್ರತಾಪ್ ಸಿಂಹರವರು ಹಂಚಿಕೊಂಡ ಬೆನ್ನಲ್ಲೆ, ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ ಮತ್ತು ಹೇಗೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಮೈಸೂರು -ಕೊಡಗು ಸಂಸದರಾದ ಪ್ರತಾಪ್ ಸಿಂಹರವರು ನಿನ್ನೆ ಬೆಳಿಗ್ಗೆ ‘ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಆರ್ ಎಸ್ ಎಸ್ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಲಾಯಿತು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

RSS

“ವಿಧಾನ ಪರಿಷತ್ತಿನಲ್ಲಿ Question Hour ಸಮಯದಲ್ಲಿ RSS ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದೆ. ಆಗ RSS ಸಂಘ ನೊಂದಣೆಯಾಗಿಲ್ಲ ಹಾಗು ಯಾವುದೆ ಆಸ್ತಿ ಹೊಂದಿಲ್ಲ ಅನ್ನುವ ಮಾಹಿತಿಯನ್ನು ಸರ್ಕಾರ ನೀಡಿದೆ.
ಇನ್ನೊಂದು ಕಡೆ ಆರ್‌ಎಸ್‌ಎಸ್‌ ಹೊಸ ಕಟ್ಟಡದ ಬಗ್ಗೆ ಸಂಸದ ಪ್ರತಾಪ್ ಸಿಂಹರವರು ಮಾಹಿತಿ ಹಂಚಿಕೊಂಡಿದ್ದಾರೆ ಅಂದರೆ ಏನರ್ಥ” ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.

ಭಾರತದಲ್ಲಿನ NGO ಗಳ ಮೇಲೆ ಇಲ್ಲ ಸಲ್ಲದ ಕಾನೂನು ಏರಿ, ಅವುಗಳ ಲೆಕ್ಕಾಚಾರ ಕೇಳಿ ಅವುಗಳ ಮೇಲೆ income Tax ಮತ್ತು CBI / ED raid ಮಾಡುವ ಆಡಳಿತ ಸರ್ಕಾರ, ಆರ್‌ಎಸ್‌ಎಸ್‌ ಸಂಘಟನೆಯ ಲೆಕ್ಕಾಚಾರದ ಬಗ್ಗೆ ಯಾಕೆ ಪ್ರಶ್ನಿಸುವುದಿಲ್ಲ. ಯಾಕೆ ಈ ದ್ವಂದ್ವ ನಿಲುವು? ಈ ದೇಶದಲ್ಲಿನ ಕಾನೂನು ಸಾಮಾನ್ಯರಿಗೆ ಒಂದು ಮತ್ತು RSS ಸಂಘಟನೆಗೆ ಬೇರೆ ಇದೆಯೆ ಎಂದು ಪ್ರಶ್ನಿಸಿದ್ದಾರೆ.

RSS

ಸತ್ಯ, ಧರ್ಮ, ದೇಶಪ್ರೇಮದ ಬಗ್ಗೆ ಉಪದೇಶ ಕೊಟ್ಟು ಅಧಿಕಾರ ಹಿಡಿಯುವ ರೀತಿಯಲ್ಲಿ, ಆರ್‌ಎಸ್‌ಎಸ್‌ ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ? ಆದಾಯ ಖರ್ಚು ವೆಚ್ಚಗಳ ಬಗ್ಗೆ ಸರ್ಕಾರಕ್ಕೆ ಉತ್ತರದಾಯಿತ್ವ ಸಲ್ಲಿಸದ ಸಂಘಟನೆಗಳು ಸರ್ಕಾರಕ್ಕೆ ಅರ್ಥಾತ್ ಸಮಾಜಕ್ಕೆ ವಂಚಿಸಿದಂತೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಹರಿಪ್ರಸಾದ್‌ರವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಅಡಿಯಲ್ಲಿ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್‌ರವರಿಗೆ ಆರ್‌ಎಸ್‌ಎಸ್‌ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಅವರು, “ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ನೋಂದಣಿಯಾಗಿಲ್ಲ” ಎಂದು ಉತ್ತರಿಸಿದ್ದರು. ಇನ್ನು ಸ್ವಂತ ಆಸ್ತಿ ಅಥವಾ ಬಾಡಿಗೆ ಕಟ್ಟಡ ಇದೆಯೆ ಎಂಬ ಹಲವು ಪ್ರಶ್ನೆಗಳಿಗೆ ಅನ್ವಹಿಸುವುದಿಲ್ಲ ಎಂದು ಉತ್ತರಿಸಿದ್ದರು.

ಕೇಂದ್ರ ಸರ್ಕಾರವು ಹಲವು ಎನ್‌ಜಿಓಗಳ ಮೇಲೆ ದಾಳಿ ನಡೆಸುತ್ತಿದೆ. ಸರ್ಕಾರದ ಎನ್‌ಐಎ ಕಳೆದ ಒಂದು ವಾರದಲ್ಲಿಯೇ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಎನ್‌ಜಿಓ ಕಚೇರಿಗಳ ಮೇಲೆ ದಾಳಿ ನಡೆಸಿ ಲೆಕ್ಕಪತ್ರ ಶೋಧಿಸುತ್ತಿದೆ. ಸರ್ಕಾರಗಳ ಈ ದಾಳಿಯಿಂದ ಖ್ಯಾತ ಮಾನವ ಹಕ್ಕು ಸಂಸ್ಥೇಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಈ ಸಂದರ್ಭದಲ್ಲಿ ಹರಿಪ್ರಸಾದ್‌ರವರ ಪ್ರಶ್ನೆಗಳು ಬಂದಿವೆ.


ಇದನ್ನೂ ಓದಿ: ಮತ್ತೊಬ್ಬ RSS ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...