Homeಅಂಕಣಗಳುಇದನ್ನು ನಮಸ್ತೆ ಟ್ರಂಪ್ ವೈರಸ್ ಅಂತ ಯಾಕೆ ಕರೀತಿಲ್ಲ?

ಇದನ್ನು ನಮಸ್ತೆ ಟ್ರಂಪ್ ವೈರಸ್ ಅಂತ ಯಾಕೆ ಕರೀತಿಲ್ಲ?

- Advertisement -
- Advertisement -

ಮಹಾಭಾರತದ ಪರೀಕ್ಷಿತನ ಕತೆ ಎಲ್ಲಾರಿಗೂ ಗೊತ್ತು. ಅಜ್ಞಾತವಾಸದ ಕಾಲದಾಗ ಅರ್ಜುನ ವಿರಾಟರಾಜನ ಮಗಳು ಉತ್ತರಾಗ ಭರತನಾಟ್ಯ ಕಲಿಸತಾನ. ಒಂದು ವರ್ಷದ ನಂತರ ಅವಳನ್ನ ಸೊಸೆಯಾಗಿ ಮಾಡಿಕೋತಾನ. ಅವಳ ಮಗ ಪರೀಕ್ಷಿತ. ಧರ್ಮರಾಜನ ನಂತರ ಅವನೇ ಹಸ್ತಿನಾಪುರದ ರಾಜ. “ನಿನ್ನ ಸಾವು ಹಾವಿನ ವಿಷದಿಂದ” ಅಂತ ಹೇಳಿ ಅವನಿಗೆ ಋಷಿಯೊಬ್ಬ ಶಾಪ ಕೊಡತಾನ. ಪರೀಕ್ಷಿತ ಹೆದರಿ ತನ್ನ ದೇಶದ ಎಲ್ಲಾ ಹಾವುಗಳನ್ನು ಕೊಲ್ಲಲಿಕ್ಕೆ ಸರ್ಪ ಸಂಹಾರ ಯಾಗ ಮಾಡತಾನ. ಆದರೂ ಸಹಿತ ಹಾವುಗಳ ರಾಜ ತಕ್ಷಕ ಒಂದು ಸಣ್ಣ ಕ್ರಿಮಿಯಾಗಿ ಅವನು ತಿನ್ನೋ ಹಣ್ಣಿನೊಳಗ ಸೇರಿಕೊಂಡು ಆತನ್ನ ಕೊಲ್ಲತಾನ.

ಆ ಹಣ್ಣು ತಿನ್ನೋ ಮುಂಚೆ ಆ ರಾಜ ಅದನ್ನ ಪರೀಕ್ಷೆ ಮಾಡಿದ್ದರ ಅವನ ಜೀವಾ ಉಳೀತಿತ್ತು ಅಂತ ಒಂದೊಂದು ಸರ್ತಿ ಅನ್ನಸತದ.
ಇದು ಯಾಕ ನೆನಪು ಮಾಡಬೇಕಾತು ಅಂದರ ಈ ಕಿರೀಟಿ ವೈರಸ್ಸಿನ ಸಂಕಟದೊಳಗ ನಮ್ಮ ಸರಕಾರದ ಮೇಲೆ ಇರೋ ಆರೋಪ ಏನಂದರ ಅದು ಎಷ್ಟು ಬೇಕೋ ಅಷ್ಟು ಪರೀಕ್ಷೆ ಮಾಡತಾ ಇಲ್ಲಾ ಅಂತ. ಒಂದು ನೂರಾ ಮೂವತ್ತು ಕೋಟಿ ಜನಾ ಇರೋ ಈ ದೇಶದೊಳಗ ಬರೇ ಹದಿಮೂರು ಲಕ್ಷ ಪರೀಕ್ಷೆ ಆಗಿದಾವು. ಖರೇ ಹೇಳಬೇಕಂದರ ಒಂದು ದಿನಕ್ಕ ಹತ್ತು ಲಕ್ಷದ ಲೆಕ್ಕದಾಗ ನೂರು ದಿನಕ್ಕ ಹತ್ತು ಕೋಟಿ ಪರೀಕ್ಷೆ ಆಗಬೇಕಿತ್ತು ಅಂತ ತಜ್ಞರ ಅಂಬೋಣ.

ನೀವು ಯಾಕ ಮಾಡತಿಲ್ಲಾ ಅಂತ ಯಾರನ್ನೂ ಕೇಳಂಗಿಲ್ಲ. ಯಾರನ್ನ ಕೇಳತೀರಿ? ಅಧಿಕಾರಿನ್ನ ಕೇಳಿದರ ರಾಜಕಾರಣಿ ಕಡೆ ತೋರಸತಾರ. ರಾಜಕಾರಣಿ ಪ್ರಧಾನಿ ಕಚೇರಿ ಕಡೆ ತೋರಸತಾರ. ಅಲ್ಲಿ ನೋಡಿದರೆ ಪಂತ ಪ್ರಧಾನರು ಬಾಯಿಗೆ ಶಾಲು ಕಟ್ಟಿಕೊಂಡು ಕೂತಾರ.

ಸರಕಾರ ಯಾಕ ಪರೀಕ್ಷೆ ಹೆಚ್ಚು ಮಾಡತಾ ಇಲ್ಲ? ಯಾಕಂದರ ಒಂದು ಪರೀಕ್ಷೆಗೆ ಸುಮಾರು 5,000 ರೂಪಾಯಿ ಬೇಕಾಗತದ. ಎಲ್ಲರಿಗೂ ಮಾಡೋವಷ್ಟು ನಮ್ಮಲ್ಲೆ ದುಡ್ಡು ಇಲ್ಲ. ಇದ್ದರೂ ನಾವು ಮಾಡಂಗಿಲ್ಲ. ಯಾಕಂದ್ರ ಪೋಲಿಯೋದ ಗತೆ ಮನಿ – ಮನೀಗೆ ಹೋಗಿ ಮಾಡಿದರ ಜನಾ ಹೆದರಿಕೋತಾರ ಅಂತ ನಮ್ಮನ್ನಾಳುವವರು ಹೇಳಿಕೋತ ಹೊಂಟಾರ.

ಆದರ ಈ ಅಸಹಾಯಕ ಉತ್ತರದ ಹಿಂದ ಒಂದು ಕುತಂತ್ರ ಇದ್ದಂಗ ಕಾಣತದ. ಇವರು ಕೊರೋನಾ ಪರೀಕ್ಷೆಯನ್ನ ಸಹಿತ ರಾಜಕೀಯ ತಂತ್ರ ಮಾಡಿಕೊಂಡಂಗ ಕಾಣತಾರ. ದೆಹಲಿ ನಿಜಾಮುದ್ದೀನಿಗೆ ಹೋದ ಮುಸ್ಲೀಮರು ಇದನ್ನು ಹಬ್ಬಿಸಿದರು ಅಂತ ಹೇಳಿ ಜನರನ್ನ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟೋದು, ಅಲ್ಲಿಗೆ ಹೋಗಿ ಬಂದವರ ಮೊದಲನೇ ಹಾಗೂ ಎರಡನೇ ಸಂಪರ್ಕಕ್ಕ ಬಂದ ವ್ಯಕ್ತಿಗಳನ್ನ ಅಷ್ಟ ಪರೀಕ್ಷೆ ಮಾಡೋದು, ಇದು ನಡದು ಬಿಟ್ಟದ. ಆ ಮುಸ್ಲೀಮರು ಇರೋ ಪ್ರದೇಶಗಳನ್ನ ಕಂಟೇನಮೆಂಟು ಜೋನ್ ಅಂತ ಮಾಡಿ ಅಲ್ಲಿ ಸೀಲ್ ಡೌನು ಮಾಡಿ ಅವರಿಗೆ ನೀರು- ನಿಡಿ ಸಿಗಲಾರದ ಹಂಗ ಮಾಡೋದು. ಅದರ ಬಗ್ಗೆ ಎಲ್ಲರಿಗೂ ಒಂದು ಕೆಟ್ಟ ಭಾವನಾ ಬಂದು ಮೈಲಿಗೆ ಪ್ರದೇಶ ಅಂತ ಮಾಡಿ ಅದರಿಂದ ಎಲ್ಲರೂ ದೂರ ಇರೋ ಹಂಗ ಮಾಡೋದು ಇವರ ಹುನ್ನಾರ ಅಂತ ಅನ್ನಸತದ.

ಇದ ಸರಕಾರ `ನಮಸ್ತೇ ಟ್ರಂಪ’ ಸಮಾರಂಭಕ್ಕೆ ಹೋದವರನ್ನು ಯಾಕ ಪರೀಕ್ಷೆ ಮಾಡತಿಲ್ಲಾ? ಮಾಡಿದರೂ ಕೂಡ ಅಹಮದಾಬಾದಿಗೆ ಹೋಗಿ ಬಂದವರು ಅಂತ ಹೇಳತದ ಹೊರತು, ಟ್ರಂಪ ಸಮಾರಂಭಕ್ಕೆ ಹೋದವರು ಅಂತ ಹೇಳಂಗಿಲ್ಲ. ಅವರ ಮೊದಲನೇ – ಎರಡನೇ ಸಂಪರ್ಕಗಳನ್ನ ಪರೀಕ್ಷೆ ಮಾಡತಾ ಇಲ್ಲ. ಅವರ ಮನೆಗಳನ್ನು ಸೀಲು ‍‍ಡೌನು ಮಾಡಿ ಅದಕ್ಕ ಮೈಲಿಗೆ ಪ್ರದೇಶ ಅಂತ ಹೇಳತಾ ಇಲ್ಲ.

ಜನವರಿಯಿಂದ ಮಾರ್ಚ 24 ರವರಗೆ ಭಾರತಕ್ಕ 20 ಲಕ್ಷ ಜನ ವಿಮಾನಗಳಿಂದ ಬಂದಾರಂತ. ಅವರನ್ನು ಕಡ್ಡಾಯ ಪರೀಕ್ಷೆ ಮಾಡಿಲ್ಲ. ಅವರ ಮೊದಲನೇ ಎರಡನೇ ಸಂಪರ್ಕ ಪರೀಕ್ಷೆ ಮಾಡಿಲ್ಲ. ಅವರ ಪ್ರದೇಶಕ್ಕೆ ಮೈಲಿಗೆ ಅಂಟಿಸಿಲ್ಲ.

ಫೆಬ್ರವರಿ- ಮಾರ್ಚಿ ತಿಂಗಳದಾಗ ಈ ದೇಶದ ಅನೇಕ ಹಳ್ಳಿ- ನಗರದೊಳಗ ಜಾತ್ರಿ- ಉತ್ಸವ- ಹಬ್ಬ ಆಗಿದಾವು, ಅಲ್ಲಿಗೆ ಲಕ್ಷಾಂತರ ಜನಾ ಹೋಗಿ ಬಂದಾರು. ಅವರನ್ನ ಪರೀಕ್ಷೆ ಮಾಡಿಲ್ಲ. ಅವರ ಸಂಪರ್ಕಕ್ಕ ಬಂದವರನ್ನ ಪರೀಕ್ಷೆ ಮಾಡಿಲ್ಲ. ಅವರಿಗೆ ಮೈಲಿಗೆ ಅಂಟಿಸಿಲ್ಲ.

ಬೆಂಗಳೂರು- ಮಂಗಳೂರು- ಬಾಗಲಕೋಟಿಯೊಳಗ ಐಟಿ ಕಂಪನಿ ಉದ್ಯೋಗಿಗಳಿಂದ ಸೋಂಕು ಹರಡೇತಿ. ಅವರಿಗೆ ಐಟಿ ಬಾಂಬ್ ಅಂತ ಹಣೆ ಪಟ್ಟಿ ಕಟ್ಟಿಲ್ಲ. ಅವರಿರೋ ಪ್ರದೇಶಗಳಿಗೆ ಮೈಲಿಗೆ ಅಂಟಿಲ್ಲ.

ಮೈಸೂರಿನ ಕಾರಖಾನೆಗೆ ಚೈನಾದಿಂದ ಸೋಂಕು ಬಂದೇತಿ ಅಂತಾರು. ಅದನ್ನ ಸರಿಯಾಗಿ ತನಿಖೆ ನಡಸಲಿಲ್ಲ. ಚೈನಾದ ಕಂಪನಿಗಳ ಜೊತೆ ವ್ಯಾಪಾರ – ವ್ಯವಹಾರ ನಡೆಸೋ ಸಾವಿರಾರು ಕಂಪನಿಗಳು ಹಳ್ಳಿಹಳ್ಳಿಗಳೊಳಗ ಅದಾವು. ಅವಕ್ಕ ಯಾರು ಮೈಲಿಗೆ ಅಂಟಿಸಿಲ್ಲ.

ಹಂಗಾರ ಸರಕಾರ ಮಾಡತಾ ಇರೋ ಮಸಲತ್ತು ಏನು?

ಐವತ್ತು ದಿವಸ ಅಗದೀ ಕಟ್ಟಾ ಲಾಕ್ ಡೌನ್ ಮಾಡಿ, ಹಾಲು ತರಲಿಕ್ಕೆ ಹೋದ ಮುದಕೀಯರ ಮ್ಯಾಲೆಲ್ಲಾ ಲಾಠಿ ಬಾರಿಸಿದ ಸರಕಾರ ಒಂದು ದಿವಸ ಮುಂಜಾನೆ ದೇಶದಾಗಿನ ಹೆಂಡದಂಗಡಿ ಎಲ್ಲಾ ತಗದು ಎಲ್ಲಾ ಕುಡಕರನ್ನು ಖುಷಿಯಾಗಿಸಿತು. ಹೆಂಡದಂಗಡಿ ಮುಂದ ಒಬ್ಬರ ಮ್ಯಾಲೆ ಒಬ್ಬರು ಬಿದ್ದು ಎಷ್ಟು ಜನರಿಗೆ ಕೊರೋನಾ ಹರಡಿತು ಅಂತ ಯಾರೂ ಪರೀಕ್ಷೆ ಮಾಡಲಿಲ್ಲ.

ಇದರ ಹಿಂದಿನ ಲೆಕ್ಕಾಚಾರ ಏನು? ಜನಾ ಸತ್ತರ ಸಾಯಲಿ, ನಮಗ ರೊಕ್ಕ ಬರಲಿ, ಅಂತೇನು ?

ಇದು ಜಾಗತಿಕ ಪರೀಕ್ಷೆಗೆ ಸಮಯ ಅಲ್ಲ. ಟಾರ್ಗೆಟೆಡ್ ಟೆಸ್ಟಿಂಗ್‍ನ ಸಮಯ ಅಂತ ಅಧಿಕಾರಿಗಳು ಅನ್ನಾಕ ಹತ್ಯಾರು. ಹಿಂಗಂದರ ಏನು? ಕೊರೋನಾ ಪರೀಕ್ಷೆ ಅಂದರ ಯಾರದರ ದೇಶಾಭಿಮಾನವನ್ನು ಒರೆಗೆ ಹಚ್ಚೋದೋ ಅಥವಾ ಬಡವರನ್ನ ಬಲಿ ಕೊಡೋದೋ?

ಮೊನ್ನೆ ಡೊನಾಲ್ಡಪ್ಪಾ ಟ್ರಂಪಣ್ಣನವರ ಅವರು ತಮ್ಮ ಬಿಳೀಮನಿಯೊಳಗ ಒಂದು ಪತ್ರಿಕಾ ಗೋಷ್ಠಿ ಕರದಿದ್ದರು. ಅದರಾಗ ಒಬ್ಬಕಿ ಹೆಣಮಗಳು ಅಮೇರಿಕಾದ ಕೊರೋನಾ ಪರೀಕ್ಷಾ ಪ್ರಮಾಣದ ಬಗ್ಗೆ, ಅಲ್ಲಿನ ಸರಕಾರದ ಇತರ ಕ್ರಮಗಳ ಬಗ್ಗೆ ಕೇಳಿದಾಗ ಸಿಟ್ಟಿಗೆದ್ದು ಬಿಟ್ಟರು. ನನ್ನೇನು ಕೇಳತೀರಿ, ಚೈನಾನ್ನ ಕೇಳರಿ ಅಂತ ಭುಸುಭುಸು ಮಾಡಿಕೋತ ಗೋಷ್ಠಿ ಅರ್ಧಾಕ್ಕ ನಿಲ್ಲಿಸಿ ಎದ್ದು ಹೋದರು. ಅವರ ಕೋಪ ಮತ್ತು ಅಮೇರಿಕಾದ ಹತಾಶ ಪರಿಸ್ಥಿತಿ ಬಗ್ಗೆ ಅಲ್ಲಿನ ಪತ್ರಿಕೆಗಳು ಬರದವು.

ನಮ್ಮಲ್ಲೂ ಹಿಂಗೇನಾರ ಆದರ ಪತ್ರಿಕೆಗಳು ಬರೀಬಹುದೇನೋ. ಆದರ ಇಲ್ಲಿನ ಬಿಳೀಮನಿಯೊಳಗ ಪತ್ರಿಕಾ ಗೋಷ್ಠಿನ ಇಲ್ಲಲ್ಲಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...