Homeಅಂಕಣಗಳುಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

ಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

- Advertisement -
- Advertisement -

ಪ್ರಧಾನಿಯವರನ್ನು ಟೀಕಿಸಿ ವ್ಯಂಗ್ಯಚಿತ್ರ ರಚಿಸಿದರೆಂದು ಪ್ರಖರ ವ್ಯಂಗ್ಯಚಿತ್ರಕಾರ ಮಂಜುಲ್ ಅವರನ್ನು ಸರ್ಕಾರ ಬೇಟೆಯಾಡಿದೆ.

ಮಂಜುಲ್ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಉದ್ಯಮ ಸಮೂಹಕ್ಕೆ ಸೇರಿದ ನೆಟ್ವರ್ಕ್-18 ಮಂಜುಲ್ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವ್ಯಂಗ್ಯಚಿತ್ರವನ್ನು ಮಂಜುಲ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇದೊಂದೇ ಅಲ್ಲ, ಮೋದಿ ಸರ್ಕಾರವನ್ನು ಕಟು ಟೀಕೆಗೆ ಗುರಿಪಡಿಸಿರುವ ನೂರಾರು ವ್ಯಂಗ್ಯಚಿತ್ರಗಳನ್ನು ಅವರು ಬರೆದಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ. ಟ್ವಿಟರ್ ಅವರಿಗೆ ನೋಟಿಸ್ ನೀಡಿದೆ. ಅವರ ಟ್ವಿಟರ್ ಖಾತೆಗೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ’ಕಾನೂನಾತ್ಮಕ ವಿನಂತಿ’ಯನ್ನು ತನಗೆ ಮಾಡಿಕೊಂಡಿರುವುದಾಗಿ ಟ್ವಿಟರ್ ನೋಟಿಸಿನಲ್ಲಿ ವಿವರಿಸಿದೆ.

ಮಂಜುಲ್

ಭಾರತದ ವ್ಯಂಗ್ಯಚಿತ್ರ ಕಲೆಯ ಪಿತಾಮಹ ಎಂದೇ ಹೆಸರಾದವವರು ಕೇಶವನ್ ಶಂಕರ ಪಿಳ್ಳೆ.

ನೆಹರೂ ಅವರನ್ನು ಲೇವಡಿ ಮಾಡಿ ರೇಗಿಸುವ ನಾಲ್ಕು ಸಾವಿರದಷ್ಟು ವ್ಯಂಗ್ಯಚಿತ್ರಗಳನ್ನು ಶಂಕರ ಪಿಳ್ಳೆ ತಮ್ಮ ಪ್ರಸಿದ್ಧ ನಿಯತಕಾಲಿಕ ’ಶಂಕರ್ಸ್ ವೀಕ್ಲಿ’ಯಲ್ಲಿ ಪ್ರಕಟಿಸಿದ್ದುಂಟು. ವಿಡಂಬನೆ-ವಿನೋದದಿಂದ ತಿವಿದರೂ ಸವಿದು ನಗುವ ಗುಣ ನೆಹರೂಗಿತ್ತು.

ನೆಹರೂ ನಂತರ ನಮ್ಮ ರಾಜಕಾರಣಿಗಳ ಪೈಕಿ ಅತಿ ಹೆಚ್ಚು ವ್ಯಂಗ್ಯಚಿತ್ರಗಳ ವಿಷಯವಸ್ತು ಆದವರು ಪ್ರಾಯಶಃ ಲಾಲೂ ಪ್ರಸಾದ್ ಯಾದವ್. ಆದರೆ ಈತ ಸರ್ವಾಧಿಕಾರಿಯಂತೆ ಉರಿದೆದ್ದ ಉದಾಹರಣೆಯಿಲ್ಲ.

ನಗೆಯಾಡುವ ಅವಕಾಶಗಳನ್ನು ಪ್ರಜೆಗಳಿಗೆ ನಿರಾಕರಿಸುವುದು ಸರ್ವಾಧಿಕಾರೀ ಆಡಳಿತದ ಪ್ರಧಾನ ಲಕ್ಷಣಗಳಲ್ಲೊಂದು. ತನ್ನ ಕುರಿತೇ ನಕ್ಕುಬಿಟ್ಟರೆ ಎಂಬ ಅಳುಕು ಸರ್ವಾಧಿಕಾರಿಯನ್ನು ಸದಾಸರ್ವದಾ ಕಾಡುತ್ತಿರುತ್ತದೆ. ಅಡಾಲ್ಫ್ ಹಿಟ್ಲರನ ಹಯಾಮಿನಲ್ಲಿ ಒಂದು ಒಳ್ಳೆಯ ಕಾಮಿಡಿ, ಒಂದು ಉತ್ತಮ ವ್ಯಂಗ್ಯಚಿತ್ರ, ಒಂದೇ ಒಂದು ವಿಡಂಬನೆ, ಅಣಕು ಕುಹಕದ ಪ್ರಸಂಗವೂ ಜರ್ಮನ್ನರಿಗೆ ನೋಡಲು ಸಿಗಲಿಲ್ಲ ಎಂದಿದ್ದಾರೆ ಶಂಕರಪಿಳ್ಳೆ. ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿ ಘೋಷಣೆಯ ನಂತರ ’ವೀಕ್ಲಿ’ಯನ್ನು ಬಂದ್ ಮಾಡಿದ್ದ ಸಂದರ್ಭವದು.

ವ್ಯಂಗ್ಯಚಿತ್ರಗಳು ಮತ್ತು ತಮ್ಮನ್ನು ಕುರಿತು ತಾವೇ ನಗುವ ಸ್ವಸ್ಥಮನಸ್ಸಿನ ಪ್ರವವೃತ್ತಿಯ ಕುರಿತು ನೆಹರೂ ಮತ್ತು ಖುದ್ದು ಶಂಕರ ಪಿಳ್ಳೆ ಹೇಳಿರುವ ವಿವೇಕದಮಾತುಗಳು ಅರ್ಧ ಶತಮಾನದಷ್ಟು ಹಳೆಯವಾದರೂ ಅತ್ಯಂತ ಪ್ರಸ್ತುತ.

‘Don`t spare me Shankar… Hit me, hit me hard’ ಎಂದು ಶಂಕರ ಪಿಳ್ಳೆಯವರಿಗೆ ಹೇಳುತ್ತಿದ್ದರು ನೆಹರೂ. ಅವರ ಈ ಕೆಳಗಿನ ಮಾತುಗಳು ಇಂದಿಗೂ ಪ್ರಸ್ತುತ.

ನಮ್ಮಲ್ಲಿ ಬಹಳ ಮಂದಿ ಶಂಕರ್ ವ್ಯಂಗ್ಯಚಿತ್ರಕ್ಕಾಗಿ ನಿತ್ಯ ಕಾಯುತ್ತಿದ್ದೆವು. ಪತ್ರಿಕೆಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ ಆ ದಿನದ ಪ್ರಮುಖ ಸುದ್ದಿಯನ್ನು ಬಿಟ್ಟು ನೇರವಾಗಿ ಶಂಕರ್ ವ್ಯಂಗ್ಯಚಿತ್ರ ಇರುತ್ತಿದ್ದ ಪುಟ ತೆರೆಯುತ್ತಿದ್ದೆವು. ಮನಸ್ಸನ್ನು ಮುದಗೊಳಿಸುತ್ತಿದ್ದುದು ಮಾತ್ರವಲ್ಲ, ಪ್ರಚಲಿತ ವಿದ್ಯಮಾನಗಳಿಗೆ ಒಳನೋಟವನ್ನು ಕಟ್ಟಿಕೊಡುತ್ತಿದ್ದವು ಶಂಕರ್ ವ್ಯಂಗ್ಯಚಿತ್ರಗಳು.

“ಶಂಕರ್ ಬಿಡಿಸುತ್ತಿದ್ದ ವ್ಯಂಗ್ಯಚಿತ್ರಗಳು ಸಮಾಜಸೇವೆಯೇ ಹೌದು. ನಾವೆಲ್ಲ ಋಣಿಯಾಗಿರಬೇಕಾದ ಸೇವೆಯಿದು. ಒಂದಲ್ಲ ಒಂದು ಹಂತದಲ್ಲಿ ಸ್ವಾರ್ಥಕೇಂದ್ರಿತರೂ ಬೊಗಳೆ ಬಿಟ್ಟು ಬಡಾಯಿ ಕೊಚ್ಚಿಕೊಳ್ಳುವವರೂ ಆಗಿಬಿಡಬಹುದಾದ ನಮ್ಮಂತಹವರ ಕಣ್ಣಿಗೆ ಕಟ್ಟುವ ಪೊರೆಯನ್ನು
ಹರಿಯುವುದು ಒಳಿತಿನ ಕೆಲಸ” ಎಂದಿದ್ದರು ನೆಹರೂ.

ಅಂದಿನ ರಾಜಕಾರಣಿಗಳು ಮತ್ತು ಮಂತ್ರಿಗಳ ವಲಯದಲ್ಲಿ ಡೆಲ್ಲಿ ಡೆವಿಲ್ ಎಂದೇ ಹೆಸರಾಗಿದ್ದರು ಶಂಕರ ಪಿಳ್ಳೆ. ಅವರು ತಮ್ಮ ಪತ್ರಿಕೆಯ ಓದುಗರನ್ನು ಉದ್ದೇಶಿಸಿ ಬರೆದಿದ್ದ ಈ ಕೆಳಕಂಡ ಮಾತುಗಳನ್ನು ಮತ್ತೆ ನೆನೆಯಬೇಕಿದೆ.

ಕೇಶವನ್ ಶಂಕರ ಪಿಳ್ಳೆ

“ನೀವು ನಗಲು ನೆರವಾಗೋದು ನಮ್ಮ ಪತ್ರಿಕೆಯ ಉದ್ದೇಶ. ಜಗತ್ತಿನ ಇತರೆ ದೇಶಗಳ ಜನ ಸಂಘರ್ಷಗಳ ನಡುವೆಯೂ ಮನಸಾರೆ ನಗುತ್ತಿದ್ದಾರೆ. ವಿನೋದ ವಿಡಂಬನೆಗಳೇ ಇಲ್ಲದ ಪೀಳಿಗೆ ನಮ್ಮದು, ಒಂಥರಾ ವರ್ಣರಹಿತ ಬೊಂಬೆಗಳ ಮೆರವಣಿಗೆ. ನಗುವ ವರವನ್ನು ವರ್ಷಗಳ ಹಿಂದೆಯೇ ಕಳೆದುಕೊಂಡವರು. ಜಡ್ಡಿನಂತಹ ಗಾಂಭೀರ್ಯವನ್ನು ಗಳಿಸಿಕೊಂಡುಬಿಟ್ಟಿದ್ದೇವೆ. ಹೆಚ್ಚೆಂದರೆ ಕೃತಕ ಹುಸಿನಗೆ ಧರಿಸಿ ಹಲ್ಲು ಕಿರಿದೇವು. ಆಕಳಿಸಿ ಕಿಸಿಕಿಸಿ ನಕ್ಕೇವು. ಹೊಟ್ಟೆ ತುಂಬ ನಗುವುದೆಂದರೆ ಅಸಭ್ಯವೆಂದು ತಿಳಿದವರು ನಾವು, ನಮ್ಮ ಕುರಿತು ನಾವೇ ನಗುವುದಂತೂ ಇಲ್ಲವೇಇಲ್ಲ. ಇತರರ ಕುರಿತು ಮತ್ತು ನಿಮ್ಮನ್ನೇ ಕುರಿತು ನಗುವುದಕ್ಕೆ ನೆರವಾಗಲಿದೆ ಶಂಕರ್ಸ್ ವೀಕ್ಲಿ… ಭಾರೀ ಬೋರುಗಳ ದೇಶವಾಗಬಾರದು ನಾವು.. ಜನರನ್ನು ನಗಿಸೋ ಪಾಲಿಸಿ ಬಿಟ್ರೆ ಈ ಪ್ರಯತ್ನದ ಹಿಂದೆ ಬೇರೆ ಯಾವ ಪಾಲಿಸಿಯೂ ಇಲ್ಲ. ನಮ್ಮನ್ನು ಏನೆಂದು ಬೇಕಾದರೂ ಕರೀರಿ. ಸೋಷಲಿಸ್ಟರು, ಕಮ್ಯುನಿಸ್ಟರು, ಹುಚ್ಚರು ಇಲ್ಲವೇ ವಕ್ರರು… ಆದ್ರೆ ನಗುವಿಗೆ ಸೈದ್ಧಾಂತಿಕ ಇಲ್ಲವೇ ಇಸಮ್ಮುಗಳ ಅಂಟು ಇರೋದು ಸಾಧ್ಯ ಇಲ್ಲ.

ಪರಿಸ್ಥಿತಿ ಬದಲಾಗಿದೆ. ಈಗ ಎಲ್ಲವೂ ಸಂಪೂರ್ಣ ಇಂಡಿಯನ್. ಇಂಗ್ಲಿಷ್ ಸಾಹೇಬರಿಗೆ ಬದಲಾಗಿ ಇಂಡಿಯನ್ ಸಾಹೇಬರುಂಟು. ನಮ್ಮ ದೌರ್ಬಲ್ಯಗಳು ರಾಷ್ಟ್ರೀಯ ದೌರ್ಬಲ್ಯಗಳು, ನಗಬೇಕು ಇಲ್ಲವೇ ಸಾಯಬೇಕು ನಾವು. ಹಾಸ್ಯಾಸ್ಪದ ಸ್ವಸಂತುಷ್ಟಿಯನ್ನು ನಗೆಯಲ್ಲಿ ಉಡಾಯಿಸಬೇಕು. ನಗಬೇಕೆಂದರೆ ತಲೆ ಕೆಳಗಾಗಿ ನಿಲ್ಲಬೇಕಿಲ್ಲ. ಪಾದ ಊರಿಯೇ ನಿಲ್ಲಿರಿ. ಬದುಕು ತಲೆ ಊರಿ ತಿರುಗುವುದನ್ನು ನೋಡಿ ಅದರ ಹತ್ತು ಹಲವು ಮುಖಗಳನ್ನು ಕಂಡು ಮನಸಾರೆ ನಗೋಣ.

“ಆಹಾ ಎಂಥಾ ಬದುಕಿದು! ಬುಶ್ಟ್ ಶರ್ಟ್ ನಾಗರಿಕತೆ, ಕಾಕ್ಟೇಲ್ಸ್ ಮತ್ತು ಮೊನಾಲಿಸಾ ನಗೆ ಹೊತ್ತ ಮೇಮ್ ಸಾಹೇಬ್, ಸೆಕ್ರೆಟೆರಿಯಟೀನಲ್ಲಿ ಖಾಲಿ ರುಂಡಗಳನ್ನು ಹೊತ್ತು ತಿರುಗುವ ಭ್ರಷ್ಟ ಮುಂಡಗಳು. ಕಪಟ ನಗುವಿನ ಕಳ್ಳಸಂತೆಕೋರರು, ಜನರ ಆದಾಯ ವೆಚ್ಚಗಳನ್ನು ನಿಯಂತ್ರಿಸುವ ಬಿಗ್ ಬಿಸಿನೆಸ್ಸುಗಳು, ಸಡಗರದ ಕುಪ್ಪಳಿಕೆಯ ರಾಜಕಾರಣಿಗಳು, ಅರಮನೆ ಕ್ರಾಂತಿಗಳ ಪ್ರಮೋಟರುಗಳು, ದೇಶೀ ರುಚಿಗಳು, ವಿದೇಶೀ ವಿಲಾಸಗಳು, ಯಾತಕ್ಕಾಗಿ ಇಂಥ ಕತ್ತೆ ಚಾಕರಿಯೆಂದು ಅರಿಯದೆ ಗುಲಾಮಗಿರಿ ಮಾಡ್ತಿರೋ ಶ್ರಮಜೀವಿ, ಏರುತ್ತಿರುವ ಸಂಬಳ-ಕೂಲಿಯ ಜೊತೆಜೊತೆಗೇ ಜಿಗಿಯುತ್ತಿರುವ ದರಗಳು, ಲೈಸೆನ್ಸ್ ಇರೋ ಲಂಚಗುಳಿತನ ಮತ್ತು ವಿಶೇಷಾಧಿಕಾರ ಎಂಬಂತಹ ಲಾಭಬಡುಕತನ, ಅರೆನಿಯಂತ್ರಿತ ಬದುಕಿನ ಅರಾಜಕತೆ, ಜನಿಸಲು ಒಲ್ಲದ ಸಂಸ್ಕೃತಿಯೊಂದರ ಎಲ್ಲ ತಮಾಷೆ ಮತ್ತು ವಿಕಟ ಹಾಸ್ಯ. ಬದುಕನ್ನು ನೋಡಬೇಕಿದ್ದರೆ ಅದು ಆರಾಮವಾಗಿ ಹರಿಯುವುದನ್ನು ಕಾಣಬೇಕೇ ವಿನಾ ಅದರ ಪಾರ್ಶ್ವನೋಟವನ್ನಷ್ಟೇ ಕಂಡರೆ ಸಾಲದು. ಒಂದಷ್ಟು ಪೀಡನೆ ಇಲ್ಲವೇ ಕೇಡಿಗತನ, ಪ್ರಾಯಶಃ ಪ್ರೀತಿ ಸಹಿಷ್ಟುತೆಗಿಂತ ಹೆಚ್ಚು ಪೀಡನೆಯೇ ಎನಿಸೀತು. ಆದರೆ ನಗೆಗೆ ಲಾಯಕ್ಕಾದ ಎಲ್ಲವನ್ನು ಕಂಡು ನಗಲೇಬೇಕು”.


ಇದನ್ನೂ ಓದಿ: ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...