Homeಅಂಕಣಗಳುಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

ಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

- Advertisement -
- Advertisement -

ಪ್ರಧಾನಿಯವರನ್ನು ಟೀಕಿಸಿ ವ್ಯಂಗ್ಯಚಿತ್ರ ರಚಿಸಿದರೆಂದು ಪ್ರಖರ ವ್ಯಂಗ್ಯಚಿತ್ರಕಾರ ಮಂಜುಲ್ ಅವರನ್ನು ಸರ್ಕಾರ ಬೇಟೆಯಾಡಿದೆ.

ಮಂಜುಲ್ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಉದ್ಯಮ ಸಮೂಹಕ್ಕೆ ಸೇರಿದ ನೆಟ್ವರ್ಕ್-18 ಮಂಜುಲ್ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವ್ಯಂಗ್ಯಚಿತ್ರವನ್ನು ಮಂಜುಲ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇದೊಂದೇ ಅಲ್ಲ, ಮೋದಿ ಸರ್ಕಾರವನ್ನು ಕಟು ಟೀಕೆಗೆ ಗುರಿಪಡಿಸಿರುವ ನೂರಾರು ವ್ಯಂಗ್ಯಚಿತ್ರಗಳನ್ನು ಅವರು ಬರೆದಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ. ಟ್ವಿಟರ್ ಅವರಿಗೆ ನೋಟಿಸ್ ನೀಡಿದೆ. ಅವರ ಟ್ವಿಟರ್ ಖಾತೆಗೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ’ಕಾನೂನಾತ್ಮಕ ವಿನಂತಿ’ಯನ್ನು ತನಗೆ ಮಾಡಿಕೊಂಡಿರುವುದಾಗಿ ಟ್ವಿಟರ್ ನೋಟಿಸಿನಲ್ಲಿ ವಿವರಿಸಿದೆ.

ಮಂಜುಲ್

ಭಾರತದ ವ್ಯಂಗ್ಯಚಿತ್ರ ಕಲೆಯ ಪಿತಾಮಹ ಎಂದೇ ಹೆಸರಾದವವರು ಕೇಶವನ್ ಶಂಕರ ಪಿಳ್ಳೆ.

ನೆಹರೂ ಅವರನ್ನು ಲೇವಡಿ ಮಾಡಿ ರೇಗಿಸುವ ನಾಲ್ಕು ಸಾವಿರದಷ್ಟು ವ್ಯಂಗ್ಯಚಿತ್ರಗಳನ್ನು ಶಂಕರ ಪಿಳ್ಳೆ ತಮ್ಮ ಪ್ರಸಿದ್ಧ ನಿಯತಕಾಲಿಕ ’ಶಂಕರ್ಸ್ ವೀಕ್ಲಿ’ಯಲ್ಲಿ ಪ್ರಕಟಿಸಿದ್ದುಂಟು. ವಿಡಂಬನೆ-ವಿನೋದದಿಂದ ತಿವಿದರೂ ಸವಿದು ನಗುವ ಗುಣ ನೆಹರೂಗಿತ್ತು.

ನೆಹರೂ ನಂತರ ನಮ್ಮ ರಾಜಕಾರಣಿಗಳ ಪೈಕಿ ಅತಿ ಹೆಚ್ಚು ವ್ಯಂಗ್ಯಚಿತ್ರಗಳ ವಿಷಯವಸ್ತು ಆದವರು ಪ್ರಾಯಶಃ ಲಾಲೂ ಪ್ರಸಾದ್ ಯಾದವ್. ಆದರೆ ಈತ ಸರ್ವಾಧಿಕಾರಿಯಂತೆ ಉರಿದೆದ್ದ ಉದಾಹರಣೆಯಿಲ್ಲ.

ನಗೆಯಾಡುವ ಅವಕಾಶಗಳನ್ನು ಪ್ರಜೆಗಳಿಗೆ ನಿರಾಕರಿಸುವುದು ಸರ್ವಾಧಿಕಾರೀ ಆಡಳಿತದ ಪ್ರಧಾನ ಲಕ್ಷಣಗಳಲ್ಲೊಂದು. ತನ್ನ ಕುರಿತೇ ನಕ್ಕುಬಿಟ್ಟರೆ ಎಂಬ ಅಳುಕು ಸರ್ವಾಧಿಕಾರಿಯನ್ನು ಸದಾಸರ್ವದಾ ಕಾಡುತ್ತಿರುತ್ತದೆ. ಅಡಾಲ್ಫ್ ಹಿಟ್ಲರನ ಹಯಾಮಿನಲ್ಲಿ ಒಂದು ಒಳ್ಳೆಯ ಕಾಮಿಡಿ, ಒಂದು ಉತ್ತಮ ವ್ಯಂಗ್ಯಚಿತ್ರ, ಒಂದೇ ಒಂದು ವಿಡಂಬನೆ, ಅಣಕು ಕುಹಕದ ಪ್ರಸಂಗವೂ ಜರ್ಮನ್ನರಿಗೆ ನೋಡಲು ಸಿಗಲಿಲ್ಲ ಎಂದಿದ್ದಾರೆ ಶಂಕರಪಿಳ್ಳೆ. ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿ ಘೋಷಣೆಯ ನಂತರ ’ವೀಕ್ಲಿ’ಯನ್ನು ಬಂದ್ ಮಾಡಿದ್ದ ಸಂದರ್ಭವದು.

ವ್ಯಂಗ್ಯಚಿತ್ರಗಳು ಮತ್ತು ತಮ್ಮನ್ನು ಕುರಿತು ತಾವೇ ನಗುವ ಸ್ವಸ್ಥಮನಸ್ಸಿನ ಪ್ರವವೃತ್ತಿಯ ಕುರಿತು ನೆಹರೂ ಮತ್ತು ಖುದ್ದು ಶಂಕರ ಪಿಳ್ಳೆ ಹೇಳಿರುವ ವಿವೇಕದಮಾತುಗಳು ಅರ್ಧ ಶತಮಾನದಷ್ಟು ಹಳೆಯವಾದರೂ ಅತ್ಯಂತ ಪ್ರಸ್ತುತ.

‘Don`t spare me Shankar… Hit me, hit me hard’ ಎಂದು ಶಂಕರ ಪಿಳ್ಳೆಯವರಿಗೆ ಹೇಳುತ್ತಿದ್ದರು ನೆಹರೂ. ಅವರ ಈ ಕೆಳಗಿನ ಮಾತುಗಳು ಇಂದಿಗೂ ಪ್ರಸ್ತುತ.

ನಮ್ಮಲ್ಲಿ ಬಹಳ ಮಂದಿ ಶಂಕರ್ ವ್ಯಂಗ್ಯಚಿತ್ರಕ್ಕಾಗಿ ನಿತ್ಯ ಕಾಯುತ್ತಿದ್ದೆವು. ಪತ್ರಿಕೆಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ ಆ ದಿನದ ಪ್ರಮುಖ ಸುದ್ದಿಯನ್ನು ಬಿಟ್ಟು ನೇರವಾಗಿ ಶಂಕರ್ ವ್ಯಂಗ್ಯಚಿತ್ರ ಇರುತ್ತಿದ್ದ ಪುಟ ತೆರೆಯುತ್ತಿದ್ದೆವು. ಮನಸ್ಸನ್ನು ಮುದಗೊಳಿಸುತ್ತಿದ್ದುದು ಮಾತ್ರವಲ್ಲ, ಪ್ರಚಲಿತ ವಿದ್ಯಮಾನಗಳಿಗೆ ಒಳನೋಟವನ್ನು ಕಟ್ಟಿಕೊಡುತ್ತಿದ್ದವು ಶಂಕರ್ ವ್ಯಂಗ್ಯಚಿತ್ರಗಳು.

“ಶಂಕರ್ ಬಿಡಿಸುತ್ತಿದ್ದ ವ್ಯಂಗ್ಯಚಿತ್ರಗಳು ಸಮಾಜಸೇವೆಯೇ ಹೌದು. ನಾವೆಲ್ಲ ಋಣಿಯಾಗಿರಬೇಕಾದ ಸೇವೆಯಿದು. ಒಂದಲ್ಲ ಒಂದು ಹಂತದಲ್ಲಿ ಸ್ವಾರ್ಥಕೇಂದ್ರಿತರೂ ಬೊಗಳೆ ಬಿಟ್ಟು ಬಡಾಯಿ ಕೊಚ್ಚಿಕೊಳ್ಳುವವರೂ ಆಗಿಬಿಡಬಹುದಾದ ನಮ್ಮಂತಹವರ ಕಣ್ಣಿಗೆ ಕಟ್ಟುವ ಪೊರೆಯನ್ನು
ಹರಿಯುವುದು ಒಳಿತಿನ ಕೆಲಸ” ಎಂದಿದ್ದರು ನೆಹರೂ.

ಅಂದಿನ ರಾಜಕಾರಣಿಗಳು ಮತ್ತು ಮಂತ್ರಿಗಳ ವಲಯದಲ್ಲಿ ಡೆಲ್ಲಿ ಡೆವಿಲ್ ಎಂದೇ ಹೆಸರಾಗಿದ್ದರು ಶಂಕರ ಪಿಳ್ಳೆ. ಅವರು ತಮ್ಮ ಪತ್ರಿಕೆಯ ಓದುಗರನ್ನು ಉದ್ದೇಶಿಸಿ ಬರೆದಿದ್ದ ಈ ಕೆಳಕಂಡ ಮಾತುಗಳನ್ನು ಮತ್ತೆ ನೆನೆಯಬೇಕಿದೆ.

ಕೇಶವನ್ ಶಂಕರ ಪಿಳ್ಳೆ

“ನೀವು ನಗಲು ನೆರವಾಗೋದು ನಮ್ಮ ಪತ್ರಿಕೆಯ ಉದ್ದೇಶ. ಜಗತ್ತಿನ ಇತರೆ ದೇಶಗಳ ಜನ ಸಂಘರ್ಷಗಳ ನಡುವೆಯೂ ಮನಸಾರೆ ನಗುತ್ತಿದ್ದಾರೆ. ವಿನೋದ ವಿಡಂಬನೆಗಳೇ ಇಲ್ಲದ ಪೀಳಿಗೆ ನಮ್ಮದು, ಒಂಥರಾ ವರ್ಣರಹಿತ ಬೊಂಬೆಗಳ ಮೆರವಣಿಗೆ. ನಗುವ ವರವನ್ನು ವರ್ಷಗಳ ಹಿಂದೆಯೇ ಕಳೆದುಕೊಂಡವರು. ಜಡ್ಡಿನಂತಹ ಗಾಂಭೀರ್ಯವನ್ನು ಗಳಿಸಿಕೊಂಡುಬಿಟ್ಟಿದ್ದೇವೆ. ಹೆಚ್ಚೆಂದರೆ ಕೃತಕ ಹುಸಿನಗೆ ಧರಿಸಿ ಹಲ್ಲು ಕಿರಿದೇವು. ಆಕಳಿಸಿ ಕಿಸಿಕಿಸಿ ನಕ್ಕೇವು. ಹೊಟ್ಟೆ ತುಂಬ ನಗುವುದೆಂದರೆ ಅಸಭ್ಯವೆಂದು ತಿಳಿದವರು ನಾವು, ನಮ್ಮ ಕುರಿತು ನಾವೇ ನಗುವುದಂತೂ ಇಲ್ಲವೇಇಲ್ಲ. ಇತರರ ಕುರಿತು ಮತ್ತು ನಿಮ್ಮನ್ನೇ ಕುರಿತು ನಗುವುದಕ್ಕೆ ನೆರವಾಗಲಿದೆ ಶಂಕರ್ಸ್ ವೀಕ್ಲಿ… ಭಾರೀ ಬೋರುಗಳ ದೇಶವಾಗಬಾರದು ನಾವು.. ಜನರನ್ನು ನಗಿಸೋ ಪಾಲಿಸಿ ಬಿಟ್ರೆ ಈ ಪ್ರಯತ್ನದ ಹಿಂದೆ ಬೇರೆ ಯಾವ ಪಾಲಿಸಿಯೂ ಇಲ್ಲ. ನಮ್ಮನ್ನು ಏನೆಂದು ಬೇಕಾದರೂ ಕರೀರಿ. ಸೋಷಲಿಸ್ಟರು, ಕಮ್ಯುನಿಸ್ಟರು, ಹುಚ್ಚರು ಇಲ್ಲವೇ ವಕ್ರರು… ಆದ್ರೆ ನಗುವಿಗೆ ಸೈದ್ಧಾಂತಿಕ ಇಲ್ಲವೇ ಇಸಮ್ಮುಗಳ ಅಂಟು ಇರೋದು ಸಾಧ್ಯ ಇಲ್ಲ.

ಪರಿಸ್ಥಿತಿ ಬದಲಾಗಿದೆ. ಈಗ ಎಲ್ಲವೂ ಸಂಪೂರ್ಣ ಇಂಡಿಯನ್. ಇಂಗ್ಲಿಷ್ ಸಾಹೇಬರಿಗೆ ಬದಲಾಗಿ ಇಂಡಿಯನ್ ಸಾಹೇಬರುಂಟು. ನಮ್ಮ ದೌರ್ಬಲ್ಯಗಳು ರಾಷ್ಟ್ರೀಯ ದೌರ್ಬಲ್ಯಗಳು, ನಗಬೇಕು ಇಲ್ಲವೇ ಸಾಯಬೇಕು ನಾವು. ಹಾಸ್ಯಾಸ್ಪದ ಸ್ವಸಂತುಷ್ಟಿಯನ್ನು ನಗೆಯಲ್ಲಿ ಉಡಾಯಿಸಬೇಕು. ನಗಬೇಕೆಂದರೆ ತಲೆ ಕೆಳಗಾಗಿ ನಿಲ್ಲಬೇಕಿಲ್ಲ. ಪಾದ ಊರಿಯೇ ನಿಲ್ಲಿರಿ. ಬದುಕು ತಲೆ ಊರಿ ತಿರುಗುವುದನ್ನು ನೋಡಿ ಅದರ ಹತ್ತು ಹಲವು ಮುಖಗಳನ್ನು ಕಂಡು ಮನಸಾರೆ ನಗೋಣ.

“ಆಹಾ ಎಂಥಾ ಬದುಕಿದು! ಬುಶ್ಟ್ ಶರ್ಟ್ ನಾಗರಿಕತೆ, ಕಾಕ್ಟೇಲ್ಸ್ ಮತ್ತು ಮೊನಾಲಿಸಾ ನಗೆ ಹೊತ್ತ ಮೇಮ್ ಸಾಹೇಬ್, ಸೆಕ್ರೆಟೆರಿಯಟೀನಲ್ಲಿ ಖಾಲಿ ರುಂಡಗಳನ್ನು ಹೊತ್ತು ತಿರುಗುವ ಭ್ರಷ್ಟ ಮುಂಡಗಳು. ಕಪಟ ನಗುವಿನ ಕಳ್ಳಸಂತೆಕೋರರು, ಜನರ ಆದಾಯ ವೆಚ್ಚಗಳನ್ನು ನಿಯಂತ್ರಿಸುವ ಬಿಗ್ ಬಿಸಿನೆಸ್ಸುಗಳು, ಸಡಗರದ ಕುಪ್ಪಳಿಕೆಯ ರಾಜಕಾರಣಿಗಳು, ಅರಮನೆ ಕ್ರಾಂತಿಗಳ ಪ್ರಮೋಟರುಗಳು, ದೇಶೀ ರುಚಿಗಳು, ವಿದೇಶೀ ವಿಲಾಸಗಳು, ಯಾತಕ್ಕಾಗಿ ಇಂಥ ಕತ್ತೆ ಚಾಕರಿಯೆಂದು ಅರಿಯದೆ ಗುಲಾಮಗಿರಿ ಮಾಡ್ತಿರೋ ಶ್ರಮಜೀವಿ, ಏರುತ್ತಿರುವ ಸಂಬಳ-ಕೂಲಿಯ ಜೊತೆಜೊತೆಗೇ ಜಿಗಿಯುತ್ತಿರುವ ದರಗಳು, ಲೈಸೆನ್ಸ್ ಇರೋ ಲಂಚಗುಳಿತನ ಮತ್ತು ವಿಶೇಷಾಧಿಕಾರ ಎಂಬಂತಹ ಲಾಭಬಡುಕತನ, ಅರೆನಿಯಂತ್ರಿತ ಬದುಕಿನ ಅರಾಜಕತೆ, ಜನಿಸಲು ಒಲ್ಲದ ಸಂಸ್ಕೃತಿಯೊಂದರ ಎಲ್ಲ ತಮಾಷೆ ಮತ್ತು ವಿಕಟ ಹಾಸ್ಯ. ಬದುಕನ್ನು ನೋಡಬೇಕಿದ್ದರೆ ಅದು ಆರಾಮವಾಗಿ ಹರಿಯುವುದನ್ನು ಕಾಣಬೇಕೇ ವಿನಾ ಅದರ ಪಾರ್ಶ್ವನೋಟವನ್ನಷ್ಟೇ ಕಂಡರೆ ಸಾಲದು. ಒಂದಷ್ಟು ಪೀಡನೆ ಇಲ್ಲವೇ ಕೇಡಿಗತನ, ಪ್ರಾಯಶಃ ಪ್ರೀತಿ ಸಹಿಷ್ಟುತೆಗಿಂತ ಹೆಚ್ಚು ಪೀಡನೆಯೇ ಎನಿಸೀತು. ಆದರೆ ನಗೆಗೆ ಲಾಯಕ್ಕಾದ ಎಲ್ಲವನ್ನು ಕಂಡು ನಗಲೇಬೇಕು”.


ಇದನ್ನೂ ಓದಿ: ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...